ಕುರಿಗಾಹಿಗಳಾದ ಲಕ್ಷ್ಮಣ, ಭೈರಪ್ಪ ಅವರಿಗೆ ಸೇರಿದ ತಲಾ ಒಂದು ಮೇಕೆ, ಬಸಣ್ಣ ಅವರಿಗೆ ಸೇರಿದ ಒಂದು ಕುರಿ, ಇವರ ಕುರಿಹಟ್ಟಿಗಳ 2 ನಾಯಿಗಳು ಈಚೆಗೆ ಚಿರತೆ ದಾಳಿಗೆ ಬಲಿಯಾಗಿವೆ. ಆಗಾಗ ಚಿರೆತೆಗಳು ಬೆಟ್ಟದಿಂದ ಆಹಾರ ಹುಡುಕಿಕೊಂಡು ಬಂದು ಹೋಗುತ್ತಿವೆ. ಇದರಿಂದ ಕೃಷಿ ಕಾರ್ಮಿಕರು, ಜಾನುವಾರು ಪೋಷಕರು ಹೆಚ್ಚು ತೊಂದರೆಗೀಡಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.