<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಬ್ರಹ್ಮಗಿರಿ ಬೆಟ್ಟದಲ್ಲಿ ಬುಧವಾರ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.</p>.<p>ಸಮೀಪದ ಜಟ್ಟಂಗಿ ರಾಮೇಶ್ವರ ಬೆಟ್ಟ, ಕೋತಿಗುಡ್ಡ, ಮಾಚೇನಹಳ್ಳಿ, ದೇವಸಮುದ್ರ, ವೆಂಕಟಾಪುರ, ದೇವಸಮುದ್ರ ಸುತ್ತಮುತ್ತಲ ಗ್ರಾಮಗಳಲ್ಲಿ ವರ್ಷದಿಂದ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು.</p>.<p>ಬ್ರಹ್ಮಗಿರಿ ಬೆಟ್ಟದಲ್ಲಿರುವ ಗೋಶಾಲೆಯಲ್ಲಿ 10 ದಿನಗಳ ಹಿಂದೆ 2 ಹಸುಗಳ ಮೇಲೆ ದಾಳಿ ಮಾಡಿತ್ತು. ಹೊಲಗಳಿಗೆ ಮೇಯಲು ಹೋಗುವ ಕುರಿ, ದನಗಳ ಮೇಲೆ ದಾಳಿ ನಡೆಸಿತ್ತು. ಚಿರತೆ ಸೆರೆ ಅರಣ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿತ್ತು.</p>.<p>ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ 3 ತಿಂಗಳ ಹಿಂದೆ ಬೆಟ್ಟದಲ್ಲಿ ಬೋನು ಇರಿಸಿದ್ದರು. ಆದರೆ, ಸೆರೆಯಾಗಿರಲಿಲ್ಲ. ಈಗ ಚಿರತೆ ಸೆರೆಯಾಗಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. </p>.<p>ಸೆರೆಯಾಗಿರುವ ಗಂಡು ಚಿರತೆಗೆ 5 ವರ್ಷ ವಯಸ್ಸಾಗಿದ್ದು, ಆರೋಗ್ಯವಾಗಿದೆ. ಮುಂದಿನ ಕ್ರಮಕ್ಕಾಗಿ ಚಿತ್ರದುರ್ಗದ ಆಡು ಮಲ್ಲೇಶ್ವರ ಮೃಗಾಲಯಕ್ಕೆ ಸಾಗಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಬ್ರಹ್ಮಗಿರಿ ಬೆಟ್ಟದಲ್ಲಿ ಬುಧವಾರ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.</p>.<p>ಸಮೀಪದ ಜಟ್ಟಂಗಿ ರಾಮೇಶ್ವರ ಬೆಟ್ಟ, ಕೋತಿಗುಡ್ಡ, ಮಾಚೇನಹಳ್ಳಿ, ದೇವಸಮುದ್ರ, ವೆಂಕಟಾಪುರ, ದೇವಸಮುದ್ರ ಸುತ್ತಮುತ್ತಲ ಗ್ರಾಮಗಳಲ್ಲಿ ವರ್ಷದಿಂದ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು.</p>.<p>ಬ್ರಹ್ಮಗಿರಿ ಬೆಟ್ಟದಲ್ಲಿರುವ ಗೋಶಾಲೆಯಲ್ಲಿ 10 ದಿನಗಳ ಹಿಂದೆ 2 ಹಸುಗಳ ಮೇಲೆ ದಾಳಿ ಮಾಡಿತ್ತು. ಹೊಲಗಳಿಗೆ ಮೇಯಲು ಹೋಗುವ ಕುರಿ, ದನಗಳ ಮೇಲೆ ದಾಳಿ ನಡೆಸಿತ್ತು. ಚಿರತೆ ಸೆರೆ ಅರಣ್ಯ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿತ್ತು.</p>.<p>ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ 3 ತಿಂಗಳ ಹಿಂದೆ ಬೆಟ್ಟದಲ್ಲಿ ಬೋನು ಇರಿಸಿದ್ದರು. ಆದರೆ, ಸೆರೆಯಾಗಿರಲಿಲ್ಲ. ಈಗ ಚಿರತೆ ಸೆರೆಯಾಗಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. </p>.<p>ಸೆರೆಯಾಗಿರುವ ಗಂಡು ಚಿರತೆಗೆ 5 ವರ್ಷ ವಯಸ್ಸಾಗಿದ್ದು, ಆರೋಗ್ಯವಾಗಿದೆ. ಮುಂದಿನ ಕ್ರಮಕ್ಕಾಗಿ ಚಿತ್ರದುರ್ಗದ ಆಡು ಮಲ್ಲೇಶ್ವರ ಮೃಗಾಲಯಕ್ಕೆ ಸಾಗಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>