<p><strong>ಮೊಳಕಾಲ್ಮುರು:</strong> ಎಲ್ಲಾ ಜಾತಿಗಳಿಗೆ ಅನ್ವಯವಾಗುವ ರೀತಿಯಲ್ಲಿ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಸಮುದಾಯವನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಮುಂದುವರಿದ ಜನಾಂಗಗಳು ಮುಂದಾಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಂಪುರದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಇಂತಹ ಜನಮುಖಿ ಕಾರ್ಯಕ್ಕೆ ಅಗತ್ಯ ಸಹಾಯವನ್ನು ನಾನು ವೈಯಕ್ತಿಕವಾಗಿ ಭರಿಸುತ್ತೇನೆ. ಶಿಕ್ಷಣದಿಂದ ಮಾತ್ರ ಹಿಂದುಳಿದ ಪ್ರದೇಶವು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.</p>.<p>ವೀರಶೈವ ಸಮಾಜದ ಮುಖಂಡ ಜಿ.ಸಿ. ನಾಗರಾಜ್ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಕ್ಕಳಲ್ಲಿ ಸ್ಫೂರ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣವಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ, ಸಮಾಜದ ಹಿರಿಯ ಮುಖಂಡರಾದ ಆರ್.ಜಿ. ಜಯಕುಮಾರ್, ಬಿ.ಪಿ.ಜಯಪ್ರಕಾಶ ರೆಡ್ಡಿ, ಬಿ.ಟಿ.ಮಂಜುನಾಥ್, ಸಮಾಜದ ಗುರು ರೇಣುಕಾಸ್ವಾಮಿ ಮಾತನಾಡಿದರು.</p>.<p>ಎಸ್ಎಸ್ಎಲ್ಸಿಯ 28 ಮತ್ತು ಪಿಯುಸಿಯಲ್ಲಿ 27 ವಿದ್ಯಾರ್ಥಿಗಳು ಸೇರಿ ಒಟ್ಟು 55 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಸಮಾಜದ ಮುಖಂಡರಾದ ಆರ್ಟಿಒ ಶರಣಪ್ಪ, ಎಂ.ಕೆ.ಮೂರ್ತಿ, ಪಿ.ಕೆ.ರವಿಶಂಕರ್, ಬಳೆ ಸೋಮಶೇಖರ್, ಗಡ್ಡೆ ತಿಪ್ಪಣ್ಣ, ಜಡೇರ್ ನಾಗರಾಜ್, ಕೆ.ಆರ್.ಬಸವರಾಜ್, ಮಲ್ಲಿಕಾರ್ಜುನ್, ಭರತ್ ಕುಮಾರ್, ರಮೇಶ್ ಹೂಗಾರ್, ಜಿ.ಬಸವರಾಜ್, ಸ್ವಾತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಎಲ್ಲಾ ಜಾತಿಗಳಿಗೆ ಅನ್ವಯವಾಗುವ ರೀತಿಯಲ್ಲಿ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಸಮುದಾಯವನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಮುಂದುವರಿದ ಜನಾಂಗಗಳು ಮುಂದಾಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಂಪುರದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಇಂತಹ ಜನಮುಖಿ ಕಾರ್ಯಕ್ಕೆ ಅಗತ್ಯ ಸಹಾಯವನ್ನು ನಾನು ವೈಯಕ್ತಿಕವಾಗಿ ಭರಿಸುತ್ತೇನೆ. ಶಿಕ್ಷಣದಿಂದ ಮಾತ್ರ ಹಿಂದುಳಿದ ಪ್ರದೇಶವು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.</p>.<p>ವೀರಶೈವ ಸಮಾಜದ ಮುಖಂಡ ಜಿ.ಸಿ. ನಾಗರಾಜ್ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಕ್ಕಳಲ್ಲಿ ಸ್ಫೂರ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣವಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ, ಸಮಾಜದ ಹಿರಿಯ ಮುಖಂಡರಾದ ಆರ್.ಜಿ. ಜಯಕುಮಾರ್, ಬಿ.ಪಿ.ಜಯಪ್ರಕಾಶ ರೆಡ್ಡಿ, ಬಿ.ಟಿ.ಮಂಜುನಾಥ್, ಸಮಾಜದ ಗುರು ರೇಣುಕಾಸ್ವಾಮಿ ಮಾತನಾಡಿದರು.</p>.<p>ಎಸ್ಎಸ್ಎಲ್ಸಿಯ 28 ಮತ್ತು ಪಿಯುಸಿಯಲ್ಲಿ 27 ವಿದ್ಯಾರ್ಥಿಗಳು ಸೇರಿ ಒಟ್ಟು 55 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ಸಮಾಜದ ಮುಖಂಡರಾದ ಆರ್ಟಿಒ ಶರಣಪ್ಪ, ಎಂ.ಕೆ.ಮೂರ್ತಿ, ಪಿ.ಕೆ.ರವಿಶಂಕರ್, ಬಳೆ ಸೋಮಶೇಖರ್, ಗಡ್ಡೆ ತಿಪ್ಪಣ್ಣ, ಜಡೇರ್ ನಾಗರಾಜ್, ಕೆ.ಆರ್.ಬಸವರಾಜ್, ಮಲ್ಲಿಕಾರ್ಜುನ್, ಭರತ್ ಕುಮಾರ್, ರಮೇಶ್ ಹೂಗಾರ್, ಜಿ.ಬಸವರಾಜ್, ಸ್ವಾತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>