‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡ ಕಟ್ಟಡ ತೆರವುಗೊಳಿಸಿ ಹೊಸ ಕೊಠಡಿಗಳ ನಿರ್ಮಾಣ ಮಾಡಬೇಕಿದೆ. ಮನವಿ, ಹೋರಾಟದ ಮೂಲಕ ಅಧಿಕಾರಿ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಬೇಡಿಕೆ ಶೀಘ್ರ ಈಡೇರಿಸಬೇಕು. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗ ಒಳಗೊಂಡ ಪದವಿ ಪೂರ್ವ ಕಾಲೇಜು ಆರಂಭವಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಚಳವಳಿ ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಪ್ಪ ತಿಳಿಸಿದರು.