<p><strong>ಸಿರಿಗೆರೆ:</strong> ವಾಣಿವಿಲಾಸ ಸಾಗರದಿಂದ ಹೊಳಲ್ಕೆರೆ ಕ್ಷೇತ್ರದ ಹಲವು ಭಾಗಗಳಿಗೆ ಕುಡಿಯುವ ನೀರು ತರುವ ಇಚ್ಛೆ ಇದ್ದು, ಅದಕ್ಕಾಗಿ ₹ 68 ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.</p>.<p>ಸಮೀಪದ ಸಿದ್ದಾಪುರ ಗ್ರಾಮದಲ್ಲಿ ₹ 4 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p><strong>ಊರಿನ ಕೆರೆ ತುಂಬಿಸಿ:</strong></p>.<p>ಗ್ರಾಮದ ಗೋಕಟ್ಟೆ ಸಮೀಪವೇ ಸಾಸ್ವೆಹಳ್ಳಿ ಯೋಜನೆಯ ಪೈಪ್ಲೈನ್ ಭೀಮಸಮುದ್ರ ಕೆರೆಯವರೆಗೆ ಹೋಗಿದೆ. ಆ ಮೂಲಕ ಗೋಕಟ್ಟೆಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಅಂತರ್ಜಲ ಮಟ್ಟವೂ ಸುಧಾರಿಸುತ್ತದೆ ಎಂದು ಸಿದ್ದಾಪುರ ಗ್ರಾಮಸ್ಥರು ಮನವಿ ಮಾಡಿದರು.</p>.<p>ಈ ಬಗ್ಗೆ ಚರ್ಚಿಸಿ ತಿಳಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಯುವ ಮೋರ್ಚಾ ಕಾರ್ಯದರ್ಶಿ ಕೆ.ಬಿ ಮೋಹನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಪ್ರದೀಪ್, ಸದಸ್ಯ ಬಸವರಾಜಪ್ಪ, ಪ್ರಕಾಶ್, ಬಸವರಾಜಯ್ಯ, ಎಸ್.ಎಂ.ಸದಾನಂದ್, ಸಿರಿಗೆರೆ ಪಂಚಾಕ್ಷರಯ್ಯ, ಪೆಟ್ರೋಲ್ ಬಸವರಾಜ್ ಭಾಗವಹಿಸಿದ್ದರು.</p>.<p>ವಿಘ್ನೇಶ್ವರ ಸ್ಟುಡಿಯೊ ಮಾಲೀಕ ಎಸ್. ಚಿದಾನಂದ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ವಾಣಿವಿಲಾಸ ಸಾಗರದಿಂದ ಹೊಳಲ್ಕೆರೆ ಕ್ಷೇತ್ರದ ಹಲವು ಭಾಗಗಳಿಗೆ ಕುಡಿಯುವ ನೀರು ತರುವ ಇಚ್ಛೆ ಇದ್ದು, ಅದಕ್ಕಾಗಿ ₹ 68 ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.</p>.<p>ಸಮೀಪದ ಸಿದ್ದಾಪುರ ಗ್ರಾಮದಲ್ಲಿ ₹ 4 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p><strong>ಊರಿನ ಕೆರೆ ತುಂಬಿಸಿ:</strong></p>.<p>ಗ್ರಾಮದ ಗೋಕಟ್ಟೆ ಸಮೀಪವೇ ಸಾಸ್ವೆಹಳ್ಳಿ ಯೋಜನೆಯ ಪೈಪ್ಲೈನ್ ಭೀಮಸಮುದ್ರ ಕೆರೆಯವರೆಗೆ ಹೋಗಿದೆ. ಆ ಮೂಲಕ ಗೋಕಟ್ಟೆಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಅಂತರ್ಜಲ ಮಟ್ಟವೂ ಸುಧಾರಿಸುತ್ತದೆ ಎಂದು ಸಿದ್ದಾಪುರ ಗ್ರಾಮಸ್ಥರು ಮನವಿ ಮಾಡಿದರು.</p>.<p>ಈ ಬಗ್ಗೆ ಚರ್ಚಿಸಿ ತಿಳಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಯುವ ಮೋರ್ಚಾ ಕಾರ್ಯದರ್ಶಿ ಕೆ.ಬಿ ಮೋಹನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಪ್ರದೀಪ್, ಸದಸ್ಯ ಬಸವರಾಜಪ್ಪ, ಪ್ರಕಾಶ್, ಬಸವರಾಜಯ್ಯ, ಎಸ್.ಎಂ.ಸದಾನಂದ್, ಸಿರಿಗೆರೆ ಪಂಚಾಕ್ಷರಯ್ಯ, ಪೆಟ್ರೋಲ್ ಬಸವರಾಜ್ ಭಾಗವಹಿಸಿದ್ದರು.</p>.<p>ವಿಘ್ನೇಶ್ವರ ಸ್ಟುಡಿಯೊ ಮಾಲೀಕ ಎಸ್. ಚಿದಾನಂದ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>