<p>ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ಮಠದ ನಿತ್ಯ ದಾಸೋಹ ಹಾಗೂ ವಿದ್ಯಾರ್ಥಿ ನಿಲಯದ ಬಳಕೆಗಾಗಿ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಭಕ್ತಾದಿಗಳು ಗುರುವಾರ ದವಸ ಧಾನ್ಯಗಳನ್ನು ಸಮರ್ಪಿಸಿದರು.</p>.<p>ಗ್ರಾಮಸ್ಥರು 9 ಕ್ವಿಂಟಲ್ ಅಕ್ಕಿ, 40 ಕೆ.ಜಿ. ಬೆಲ್ಲ, 5 ಕೆ.ಜಿ. ಒಣಮೆಣಸಿನಕಾಯಿ, 5 ಕೆ.ಜಿ. ಖಾರದ ಪುಡಿ ಸೇರಿದಂತೆ ವಿವಿಧ ದಿನಸಿ ಸಾಮಗ್ರಿಗಳನ್ನು ಮಠಕ್ಕೆ ಅರ್ಪಿಸಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಆಶೀರ್ವಾದ ಪಡೆದರು.</p>.<p>‘ಭಕ್ತಾದಿಗಳು ಕಾಯಕ ಮತ್ತು ದಾಸೋಹ ಪ್ರಜ್ಞೆ ಮೈಗೂಡಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಸತ್ಕಾರ್ಯಗಳಿಂದ ಧರ್ಮದ ದಾರಿಯಲ್ಲಿ ನಡೆದು ಆದರ್ಶ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ವ್ಯಕ್ತಿ ಪರಿಶುದ್ಧವಾಗಿದ್ದರೆ ಸಮಾಜವೂ ಶುದ್ಧವಾಗುತ್ತದೆ. ಶಿಕ್ಷಣ ಮತ್ತು ದಾಸೋಹಕ್ಕೆ ನೀಡುವ ಈ ಸದ್ಭಾವನೆಗಳು ಇತರರಿಗೂ ಮಾದರಿಯಾಗಲಿ’ ಎಂದು ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.</p>.<p>ಲಿಂಗದಹಳ್ಳಿ ಗ್ರಾಮಸ್ಥರು ಹಾಗೂ ಮಠದ ಭಕ್ತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1855800575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ಮಠದ ನಿತ್ಯ ದಾಸೋಹ ಹಾಗೂ ವಿದ್ಯಾರ್ಥಿ ನಿಲಯದ ಬಳಕೆಗಾಗಿ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಭಕ್ತಾದಿಗಳು ಗುರುವಾರ ದವಸ ಧಾನ್ಯಗಳನ್ನು ಸಮರ್ಪಿಸಿದರು.</p>.<p>ಗ್ರಾಮಸ್ಥರು 9 ಕ್ವಿಂಟಲ್ ಅಕ್ಕಿ, 40 ಕೆ.ಜಿ. ಬೆಲ್ಲ, 5 ಕೆ.ಜಿ. ಒಣಮೆಣಸಿನಕಾಯಿ, 5 ಕೆ.ಜಿ. ಖಾರದ ಪುಡಿ ಸೇರಿದಂತೆ ವಿವಿಧ ದಿನಸಿ ಸಾಮಗ್ರಿಗಳನ್ನು ಮಠಕ್ಕೆ ಅರ್ಪಿಸಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಆಶೀರ್ವಾದ ಪಡೆದರು.</p>.<p>‘ಭಕ್ತಾದಿಗಳು ಕಾಯಕ ಮತ್ತು ದಾಸೋಹ ಪ್ರಜ್ಞೆ ಮೈಗೂಡಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಸತ್ಕಾರ್ಯಗಳಿಂದ ಧರ್ಮದ ದಾರಿಯಲ್ಲಿ ನಡೆದು ಆದರ್ಶ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ವ್ಯಕ್ತಿ ಪರಿಶುದ್ಧವಾಗಿದ್ದರೆ ಸಮಾಜವೂ ಶುದ್ಧವಾಗುತ್ತದೆ. ಶಿಕ್ಷಣ ಮತ್ತು ದಾಸೋಹಕ್ಕೆ ನೀಡುವ ಈ ಸದ್ಭಾವನೆಗಳು ಇತರರಿಗೂ ಮಾದರಿಯಾಗಲಿ’ ಎಂದು ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.</p>.<p>ಲಿಂಗದಹಳ್ಳಿ ಗ್ರಾಮಸ್ಥರು ಹಾಗೂ ಮಠದ ಭಕ್ತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1855800575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>