<p><strong>ಚಿತ್ರದುರ್ಗ</strong>: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.</p><p>ಕಚೇರಿ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ.ದರ್ಜೆ ನೌಕರ ತಿಪ್ಪೇಸ್ವಾಮಿ, ವಾಹನ ಚಾಲಕ ರವಿ ಅಮಾನತುಗೊಂಡ ಸಿಬ್ಬಂದಿ. ಕಚೇರಿಯಲ್ಲಿ ಪಾರ್ಟಿ ಮಾಡಿದ ವಿಡಿಯೊವೊಂದು ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಡಿಡಿಪಿಐ ಎಂ.ಆರ್.ಮಂಜುನಾಥ್ ಸಿಬ್ಬಂದಿಯ ಅಮಾನತಿಗೆ ಶಿಫಾರಸು ಮಾಡಿದ್ದರು.</p><p>ಕಚೇರಿಯಲ್ಲಿ 20 ಲೀಟರ್ ನೀರಿನ ಕ್ಯಾನ್ಗೆ ಬಾಟಲಿಗಳಿಂದ ಮದ್ಯ ಸುರಿಯುವ, ಅದಕ್ಕೆ ನೀರು ತುಂಬಿಸುವ, ಕೆಲವರು ಅಲ್ಲೇ ಮದ್ಯ ಸೇವಿಸುವ, ನಂತರ ಕಾರ್ನಲ್ಲಿ ಕ್ಯಾನ್ ಇಟ್ಟುಕೊಂಡು ಬೇರೆ ಸ್ಥಳಕ್ಕೆ ತೆರಳುವ ದೃಶ್ಯಗಳು ವಿಡಿಯೊದಲ್ಲಿವೆ.</p><p>‘ಅ.7ರಂದು ವಾಲ್ಮೀಕಿ ಜಯಂತಿಯ ದಿನ ಘಟನೆ ನಡೆದಿದೆ. ನನ್ನ ಗಮನಕ್ಕೆ ಬಂದ ಕೂಡಲೇ ನಾಲ್ವರು ಸಿಬ್ಬಂದಿಯ ಅಮಾನತಿಗೆ ಶಿಫಾರಸು ಮಾಡಿದ್ದೆ. ಜಿಲ್ಲಾಧಿಕಾರಿಗಳನ್ನು ಅವರನ್ನು ಅಮಾನತು ಮಾಡಿದ್ದಾರೆ’ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.</p><p>ಕಚೇರಿ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ.ದರ್ಜೆ ನೌಕರ ತಿಪ್ಪೇಸ್ವಾಮಿ, ವಾಹನ ಚಾಲಕ ರವಿ ಅಮಾನತುಗೊಂಡ ಸಿಬ್ಬಂದಿ. ಕಚೇರಿಯಲ್ಲಿ ಪಾರ್ಟಿ ಮಾಡಿದ ವಿಡಿಯೊವೊಂದು ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಡಿಡಿಪಿಐ ಎಂ.ಆರ್.ಮಂಜುನಾಥ್ ಸಿಬ್ಬಂದಿಯ ಅಮಾನತಿಗೆ ಶಿಫಾರಸು ಮಾಡಿದ್ದರು.</p><p>ಕಚೇರಿಯಲ್ಲಿ 20 ಲೀಟರ್ ನೀರಿನ ಕ್ಯಾನ್ಗೆ ಬಾಟಲಿಗಳಿಂದ ಮದ್ಯ ಸುರಿಯುವ, ಅದಕ್ಕೆ ನೀರು ತುಂಬಿಸುವ, ಕೆಲವರು ಅಲ್ಲೇ ಮದ್ಯ ಸೇವಿಸುವ, ನಂತರ ಕಾರ್ನಲ್ಲಿ ಕ್ಯಾನ್ ಇಟ್ಟುಕೊಂಡು ಬೇರೆ ಸ್ಥಳಕ್ಕೆ ತೆರಳುವ ದೃಶ್ಯಗಳು ವಿಡಿಯೊದಲ್ಲಿವೆ.</p><p>‘ಅ.7ರಂದು ವಾಲ್ಮೀಕಿ ಜಯಂತಿಯ ದಿನ ಘಟನೆ ನಡೆದಿದೆ. ನನ್ನ ಗಮನಕ್ಕೆ ಬಂದ ಕೂಡಲೇ ನಾಲ್ವರು ಸಿಬ್ಬಂದಿಯ ಅಮಾನತಿಗೆ ಶಿಫಾರಸು ಮಾಡಿದ್ದೆ. ಜಿಲ್ಲಾಧಿಕಾರಿಗಳನ್ನು ಅವರನ್ನು ಅಮಾನತು ಮಾಡಿದ್ದಾರೆ’ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>