<p><strong>ಸಿರಿಗೆರೆ:</strong> ಭರಮಸಾಗರದ ಸಮೀಪದ ಬಹದ್ದೂರುಘಟ್ಟದ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಭ್ರಮ ಮನೆಮಾಡಿತ್ತು.</p>.<p>ಶಾಲೆಯಲ್ಲಿ ಸಾಮೂಹಿಕವಾಗಿ ಹಮ್ಮಿಕೊಂಡಿದ್ದ ಮಕ್ಕಳ ಅಕ್ಷರಾಭ್ಯಾಸಕ್ಕಾಗಿ ಶೃಂಗರಿಸಿಕೊಂಡು ಬಂದಿದ್ದ ತಾಯಂದಿರು ತಮ್ಮ ಮಕ್ಕಳ ಕೈಹಿಡಿದು ಶಾಲೆಗೆ ಕರೆತಂದರು.</p>.<p>ವಿಘ್ನೇಶ್ವರ, ಸರಸ್ವತಿ ಪೂಜೆಯೊಂದಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಆರಂಭಿಸಲಾಯಿತು. ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ತಟ್ಟೆಯಲ್ಲಿ ತುಂಬಿದ ಅಕ್ಕಿಯ ಮೇಲೆ, ಅರಿಸಿನದ ಕೊಂಬಿನಿಂದ ಓಂಕಾರ ಮತ್ತು ಗಣೇಶನಾಮ ಮತ್ತು ಕನ್ನಡದ ಮೊದಲ ಅಕ್ಷರವನ್ನು ತಾಯಂದಿರು ಬರೆಸಿದರು.</p>.<p>ಈ ಸಂಭ್ರಮಕ್ಕೆ ಸಾಕ್ಷಿಯಾದ ಪೋಷಕಿ ಸಿ.ಆರ್.ಪಿ ವರಲಕ್ಷ್ಮಿ ಮಾತನಾಡಿ, ‘ಮಕ್ಕಳಿಗೆ ಇದು ಸಂಭ್ರಮದ ದಿನ. ಮಕ್ಕಳು ಆರಂಭದಲ್ಲಿ ತಮ್ಮ ತಂದೆ ತಾಯಿಗಳಿಂದ ಅಕ್ಷರಾಭ್ಯಾಸವನ್ನು ಆರಂಭಿಸುತ್ತಾರೆ. ಮಕ್ಕಳಿಗೆ ಯಾರೇ ಶಿಕ್ಷಣ ಕಲಿಸಿದರೂ ಮೊದಲು ತಾಯಿಯಿಂದ ಕಲಿಯುವಂತಹ ಶಿಕ್ಷಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದರು.</p>.<p>ಶಾಲೆಯ ಸಲಹಾ ಸಮಿತಿಯ ಉಪಾಧ್ಯಕ್ಷ ಎಚ್.ಎಸ್.ನಾಗರಾಜಪ್ಪ, ಕಲ್ಲಮ್ಮ ಪ್ರೌಢಶಾಲೆಯ ಕಾರ್ಯದರ್ಶಿ ಈ.ತಿಪ್ಪಣ್ಣ ಮಾತನಾಡಿದರು.</p>.<p>ಸಲಹಾ ಸಮಿತಿ ಅಧ್ಯಕ್ಷ ಕೆ.ಬಸವರಾಜಪ್ಪ, ಮುಖ್ಯ ಶಿಕ್ಷಕ ಎಸ್.ಎಂ ಸುನೀಲ್ಕುಮಾರ್, ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಭರಮಸಾಗರದ ಸಮೀಪದ ಬಹದ್ದೂರುಘಟ್ಟದ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಭ್ರಮ ಮನೆಮಾಡಿತ್ತು.</p>.<p>ಶಾಲೆಯಲ್ಲಿ ಸಾಮೂಹಿಕವಾಗಿ ಹಮ್ಮಿಕೊಂಡಿದ್ದ ಮಕ್ಕಳ ಅಕ್ಷರಾಭ್ಯಾಸಕ್ಕಾಗಿ ಶೃಂಗರಿಸಿಕೊಂಡು ಬಂದಿದ್ದ ತಾಯಂದಿರು ತಮ್ಮ ಮಕ್ಕಳ ಕೈಹಿಡಿದು ಶಾಲೆಗೆ ಕರೆತಂದರು.</p>.<p>ವಿಘ್ನೇಶ್ವರ, ಸರಸ್ವತಿ ಪೂಜೆಯೊಂದಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಆರಂಭಿಸಲಾಯಿತು. ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ತಟ್ಟೆಯಲ್ಲಿ ತುಂಬಿದ ಅಕ್ಕಿಯ ಮೇಲೆ, ಅರಿಸಿನದ ಕೊಂಬಿನಿಂದ ಓಂಕಾರ ಮತ್ತು ಗಣೇಶನಾಮ ಮತ್ತು ಕನ್ನಡದ ಮೊದಲ ಅಕ್ಷರವನ್ನು ತಾಯಂದಿರು ಬರೆಸಿದರು.</p>.<p>ಈ ಸಂಭ್ರಮಕ್ಕೆ ಸಾಕ್ಷಿಯಾದ ಪೋಷಕಿ ಸಿ.ಆರ್.ಪಿ ವರಲಕ್ಷ್ಮಿ ಮಾತನಾಡಿ, ‘ಮಕ್ಕಳಿಗೆ ಇದು ಸಂಭ್ರಮದ ದಿನ. ಮಕ್ಕಳು ಆರಂಭದಲ್ಲಿ ತಮ್ಮ ತಂದೆ ತಾಯಿಗಳಿಂದ ಅಕ್ಷರಾಭ್ಯಾಸವನ್ನು ಆರಂಭಿಸುತ್ತಾರೆ. ಮಕ್ಕಳಿಗೆ ಯಾರೇ ಶಿಕ್ಷಣ ಕಲಿಸಿದರೂ ಮೊದಲು ತಾಯಿಯಿಂದ ಕಲಿಯುವಂತಹ ಶಿಕ್ಷಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದರು.</p>.<p>ಶಾಲೆಯ ಸಲಹಾ ಸಮಿತಿಯ ಉಪಾಧ್ಯಕ್ಷ ಎಚ್.ಎಸ್.ನಾಗರಾಜಪ್ಪ, ಕಲ್ಲಮ್ಮ ಪ್ರೌಢಶಾಲೆಯ ಕಾರ್ಯದರ್ಶಿ ಈ.ತಿಪ್ಪಣ್ಣ ಮಾತನಾಡಿದರು.</p>.<p>ಸಲಹಾ ಸಮಿತಿ ಅಧ್ಯಕ್ಷ ಕೆ.ಬಸವರಾಜಪ್ಪ, ಮುಖ್ಯ ಶಿಕ್ಷಕ ಎಸ್.ಎಂ ಸುನೀಲ್ಕುಮಾರ್, ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>