<p><strong>ಚಿತ್ರದುರ್ಗ: </strong>ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ‘ಎಲ್ಕೆಜಿ, ಯುಕೆಜಿ ತರಗತಿ’ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಮುಖ್ಯರಸ್ತೆ ಮಾರ್ಗಗಳಲ್ಲಿ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮೂಲಕ ಮನವಿ ರವಾನಿಸಿದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ಬಾಬು, ‘ಐಸಿಡಿಎಸ್ ಯೋಜನೆ ಉಳಿಸಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮರಣ ಹೊಂದಿದಾಗ ಅವರ ಮಗಳಿಗೆ ಅನುಕಂಪದ ಆಧಾರದ ಮೇಲೆ ಹುದ್ದೆ ನೀಡಬೇಕು. ಕೊರೊನಾ ವಾರಿಯರ್ ಎಂಬುದಾಗಿ ಪರಿಗಣಿಸಿ, ಮೃತಪಟ್ಟ ಸಂದರ್ಭದಲ್ಲಿ ₹ 30 ಲಕ್ಷ ವಿಮೆಯನ್ನು ತುರ್ತಾಗಿ ನೀಡಬೇಕು. ಪಿಂಚಣಿ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಮುನಾಬಾಯಿ, ಸಾವಿತ್ರಮ್ಮ, ರತ್ನಮ್ಮ, ರಾಧಮ್ಮ, ಭಾಗ್ಯಮ್ಮ, ವಿನೋಧಮ್ಮ, ಟಿ.ಆರ್. ಉಮಾಪತಿ, ಸತ್ಯಕೀರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ‘ಎಲ್ಕೆಜಿ, ಯುಕೆಜಿ ತರಗತಿ’ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಮುಖ್ಯರಸ್ತೆ ಮಾರ್ಗಗಳಲ್ಲಿ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮೂಲಕ ಮನವಿ ರವಾನಿಸಿದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ಬಾಬು, ‘ಐಸಿಡಿಎಸ್ ಯೋಜನೆ ಉಳಿಸಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮರಣ ಹೊಂದಿದಾಗ ಅವರ ಮಗಳಿಗೆ ಅನುಕಂಪದ ಆಧಾರದ ಮೇಲೆ ಹುದ್ದೆ ನೀಡಬೇಕು. ಕೊರೊನಾ ವಾರಿಯರ್ ಎಂಬುದಾಗಿ ಪರಿಗಣಿಸಿ, ಮೃತಪಟ್ಟ ಸಂದರ್ಭದಲ್ಲಿ ₹ 30 ಲಕ್ಷ ವಿಮೆಯನ್ನು ತುರ್ತಾಗಿ ನೀಡಬೇಕು. ಪಿಂಚಣಿ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಜಮುನಾಬಾಯಿ, ಸಾವಿತ್ರಮ್ಮ, ರತ್ನಮ್ಮ, ರಾಧಮ್ಮ, ಭಾಗ್ಯಮ್ಮ, ವಿನೋಧಮ್ಮ, ಟಿ.ಆರ್. ಉಮಾಪತಿ, ಸತ್ಯಕೀರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>