<p><strong>ಚಿತ್ರದುರ್ಗ: </strong>ಕೊರೊನಾ ಸೋಂಕು ದೃಢಪಡುವ ಪ್ರಮಾಣ ಶೇ 5ಕ್ಕಿಂತ ಹೆಚ್ಚಿರುವ ಕಾರಣಕ್ಕೆ ಜಿಲ್ಲೆಯಲ್ಲಿ ಇನ್ನೂ ಎರಡು ವಾರ ಲಾಕ್ಡೌನ್ ನಿರ್ಬಂಧ ಮುಂದುವರಿಯಲಿದೆ. ಹಲವು ನಿಯಮಗಳನ್ನು ಮಾರ್ಪಾಡು ಮಾಡಲಾಗಿದ್ದು, ರಾತ್ರಿ ಹಾಗೂ ವಾರಾಂತ್ಯದ ಕರ್ಫ್ಯೂ ಇರಲಿದೆ.</p>.<p>ಹಲವು ದಿನಗಳಿಂದ ಸರ್ಕಾರ ವಿಧಿಸಿದ ಲಾಕ್ಡೌನ್ನ ಹಂತವೊಂದು ಜೂನ್ 20ಕ್ಕೆ ಕೊನೆಯಾಗಿದೆ. ಸೋಂಕಿನ ತೀವ್ರತೆ ಕಡಿಮೆ ಇರುವ ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಚಿತ್ರದುರ್ಗ ಸೇರಿ ಇತರ ಜಿಲ್ಲೆಯಲ್ಲಿ ಜುಲೈ 5ರವರೆಗೆ ಲಾಕ್ಡೌನ್ ಯಥಾಸ್ಥಿತಿ ಮುಂದುವರಿಯಲಿದೆ.</p>.<p>ನಿತ್ಯ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬಸ್ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಮದ್ಯದಂಗಡಿ, ಹೋಟೆಲ್ಗಳಲ್ಲಿ ಪಾರ್ಸಲ್ ಸೇವೆಗೆ ಅನುಮತಿ ನೀಡಲಾಗಿದೆ. ನಿತ್ಯ ಸಂಜೆ 7ರಿಂದ ನಸುಕಿನ 5ರವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ಈ ಅವಧಿಯಲ್ಲಿ ಜನ ಹಾಗೂ ಎಲ್ಲ ವಾಹನ ಸಂಚಾರಕ್ಕೆ ಅವಕಾಶವಿಲ್ಲ.</p>.<p>‘ಸರ್ಕಾರ ರೂಪಿಸಿದ ಹೊಸ ಮಾರ್ಗಸೂಚಿ ಅನ್ವಯ ಆದೇಶ ಹೊರಡಿಸಲಾಗಿದೆ. ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಇರಲಿದೆ. ಈ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಚ್ಚರಿಕೆ ನೀಡಿದ್ದಾರೆ.</p>.<p>‘ಜೂನ್ 11ರಂದು ಹೊರಡಿಸಿರುವ ಮಾರ್ಗಸೂಚಿ ಜಿಲ್ಲೆಯಲ್ಲಿ ಮುಂದುವರೆಯಲಿದೆ. ಆಹಾರ, ದಿನಸಿ, ಹಣ್ಣು ತರಕಾರಿ, ಮಾಂಸ, ಮೀನು, ಡೇರಿ ಉತ್ಪನ್ನ, ಬೀದಿ ಬದಿ ವ್ಯಾಪಾರ, ಪಡಿತರ ಅಂಗಡಿಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ತೆರೆಯಬಹುದು. ಉದ್ಯಾನಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ವಾಯುವಿಹಾರ ಮಾಡಬಹುದು. ಇ–ಕಾಮರ್ಸ್ ಸೇವೆಗೆ ಯಾವುದೇ ನಿರ್ಬಂಧ ಇಲ್ಲ’ ಎಂದು ತಿಳಿಸಿದ್ದಾರೆ.</p>.<p>ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿದೆ. ಕೃಷಿ ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿ, ಲೋಕೋಪಯೋಗಿ ಇಲಾಖೆ, ವಸತಿ, ಸಹಕಾರ, ಕಂದಾಯ, ನಬಾರ್ಡ್ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲಿವೆ. ಕೃಷಿ ಚಟುವಟಿಕೆ, ಗ್ರಾಮೀಣ ಪ್ರದೇಶದಲ್ಲಿ ರೈತರ ಕೆಲಸಗಳಿಗೆ ನಿರ್ಬಂಧವಿಲ್ಲ.</p>.<p class="Subhead">ಬಟ್ಟೆ, ಆಭರಣದಂಗಡಿಗೆ ನಿರ್ಬಂಧ</p>.<p>ಬಟ್ಟೆ ಹಾಗೂ ಚಿನ್ನಾಭರಣ ಮಳಿಗೆಗಳು ತೆರೆಯಲು ಹೊಸ ಮಾರ್ಗಸೂಚಿಯಲ್ಲಿಯೂ ಅವಕಾಶ ಸಿಕ್ಕಿಲ್ಲ. ಜುಲೈ 5ರವರೆಗೆ ಇವು ಸೇವೆ ಒದಗಿಸುವುದಿಲ್ಲ.</p>.<p>‘ಕಾರ್ಖಾನೆಗಳಲ್ಲಿ ಉತ್ಪಾದನೆಗೆ ಅವಕಾಶವಿದೆ. ಅರ್ಧದಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಬಹುದಾಗಿದೆ. ಗಾರ್ಮೆಂಟ್ಸ್ಗಳಲ್ಲಿ ಶೇ 30ರಷ್ಟು ಕಾರ್ಮಿಕರು ಕಾರ್ಯನಿರ್ವಹಿಸಬಹುದು. ಆದರೆ, ಬಟ್ಟೆ, ಆಭರಣ ಮಳಿಗೆ ಹಾಗೂ ಶೋರೂಂ ಬಾಗಿಲು ತೆರೆಯಲು ಅವಕಾಶ ಇಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಹಿತಿ ನೀಡಿದ್ದಾರೆ.</p>.<p>‘ಮದುವೆ ಸಮಾರಂಭಗಳಿಗೆ 40 ಹಾಗೂ ಅಂತ್ಯಕ್ರಿಯೆಗೆ 5 ಮಂದಿಗೆ ಪಾಲ್ಗೊಳ್ಳಬಹುದು. ಇದಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಸಂಜೆ 7 ಗಂಟೆಯ ಒಳಗೆ ಮನೆ ಸೇರಿಸಿಕೊಳ್ಳಬೇಕು. ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ಸಂಚರಿಸಬಾರದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>***</p>.<p>ಕೋವಿಡ್ ನಿಯಂತ್ರಣಕ್ಕೆ ನಿರ್ಬಂಧ ಅನಿವಾರ್ಯ. ಜುಲೈ 5ರವರೆಗೆ ಯಥಾಸ್ಥಿತಿ ಮುಂದುವರಿಯಲಿದೆ. ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.</p>.<p>ಕವಿತಾ ಎಸ್.ಮನ್ನಿಕೇರಿ<br />ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕೊರೊನಾ ಸೋಂಕು ದೃಢಪಡುವ ಪ್ರಮಾಣ ಶೇ 5ಕ್ಕಿಂತ ಹೆಚ್ಚಿರುವ ಕಾರಣಕ್ಕೆ ಜಿಲ್ಲೆಯಲ್ಲಿ ಇನ್ನೂ ಎರಡು ವಾರ ಲಾಕ್ಡೌನ್ ನಿರ್ಬಂಧ ಮುಂದುವರಿಯಲಿದೆ. ಹಲವು ನಿಯಮಗಳನ್ನು ಮಾರ್ಪಾಡು ಮಾಡಲಾಗಿದ್ದು, ರಾತ್ರಿ ಹಾಗೂ ವಾರಾಂತ್ಯದ ಕರ್ಫ್ಯೂ ಇರಲಿದೆ.</p>.<p>ಹಲವು ದಿನಗಳಿಂದ ಸರ್ಕಾರ ವಿಧಿಸಿದ ಲಾಕ್ಡೌನ್ನ ಹಂತವೊಂದು ಜೂನ್ 20ಕ್ಕೆ ಕೊನೆಯಾಗಿದೆ. ಸೋಂಕಿನ ತೀವ್ರತೆ ಕಡಿಮೆ ಇರುವ ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಚಿತ್ರದುರ್ಗ ಸೇರಿ ಇತರ ಜಿಲ್ಲೆಯಲ್ಲಿ ಜುಲೈ 5ರವರೆಗೆ ಲಾಕ್ಡೌನ್ ಯಥಾಸ್ಥಿತಿ ಮುಂದುವರಿಯಲಿದೆ.</p>.<p>ನಿತ್ಯ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬಸ್ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಮದ್ಯದಂಗಡಿ, ಹೋಟೆಲ್ಗಳಲ್ಲಿ ಪಾರ್ಸಲ್ ಸೇವೆಗೆ ಅನುಮತಿ ನೀಡಲಾಗಿದೆ. ನಿತ್ಯ ಸಂಜೆ 7ರಿಂದ ನಸುಕಿನ 5ರವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ಈ ಅವಧಿಯಲ್ಲಿ ಜನ ಹಾಗೂ ಎಲ್ಲ ವಾಹನ ಸಂಚಾರಕ್ಕೆ ಅವಕಾಶವಿಲ್ಲ.</p>.<p>‘ಸರ್ಕಾರ ರೂಪಿಸಿದ ಹೊಸ ಮಾರ್ಗಸೂಚಿ ಅನ್ವಯ ಆದೇಶ ಹೊರಡಿಸಲಾಗಿದೆ. ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಇರಲಿದೆ. ಈ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಚ್ಚರಿಕೆ ನೀಡಿದ್ದಾರೆ.</p>.<p>‘ಜೂನ್ 11ರಂದು ಹೊರಡಿಸಿರುವ ಮಾರ್ಗಸೂಚಿ ಜಿಲ್ಲೆಯಲ್ಲಿ ಮುಂದುವರೆಯಲಿದೆ. ಆಹಾರ, ದಿನಸಿ, ಹಣ್ಣು ತರಕಾರಿ, ಮಾಂಸ, ಮೀನು, ಡೇರಿ ಉತ್ಪನ್ನ, ಬೀದಿ ಬದಿ ವ್ಯಾಪಾರ, ಪಡಿತರ ಅಂಗಡಿಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ತೆರೆಯಬಹುದು. ಉದ್ಯಾನಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ವಾಯುವಿಹಾರ ಮಾಡಬಹುದು. ಇ–ಕಾಮರ್ಸ್ ಸೇವೆಗೆ ಯಾವುದೇ ನಿರ್ಬಂಧ ಇಲ್ಲ’ ಎಂದು ತಿಳಿಸಿದ್ದಾರೆ.</p>.<p>ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿದೆ. ಕೃಷಿ ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿ, ಲೋಕೋಪಯೋಗಿ ಇಲಾಖೆ, ವಸತಿ, ಸಹಕಾರ, ಕಂದಾಯ, ನಬಾರ್ಡ್ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲಿವೆ. ಕೃಷಿ ಚಟುವಟಿಕೆ, ಗ್ರಾಮೀಣ ಪ್ರದೇಶದಲ್ಲಿ ರೈತರ ಕೆಲಸಗಳಿಗೆ ನಿರ್ಬಂಧವಿಲ್ಲ.</p>.<p class="Subhead">ಬಟ್ಟೆ, ಆಭರಣದಂಗಡಿಗೆ ನಿರ್ಬಂಧ</p>.<p>ಬಟ್ಟೆ ಹಾಗೂ ಚಿನ್ನಾಭರಣ ಮಳಿಗೆಗಳು ತೆರೆಯಲು ಹೊಸ ಮಾರ್ಗಸೂಚಿಯಲ್ಲಿಯೂ ಅವಕಾಶ ಸಿಕ್ಕಿಲ್ಲ. ಜುಲೈ 5ರವರೆಗೆ ಇವು ಸೇವೆ ಒದಗಿಸುವುದಿಲ್ಲ.</p>.<p>‘ಕಾರ್ಖಾನೆಗಳಲ್ಲಿ ಉತ್ಪಾದನೆಗೆ ಅವಕಾಶವಿದೆ. ಅರ್ಧದಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಬಹುದಾಗಿದೆ. ಗಾರ್ಮೆಂಟ್ಸ್ಗಳಲ್ಲಿ ಶೇ 30ರಷ್ಟು ಕಾರ್ಮಿಕರು ಕಾರ್ಯನಿರ್ವಹಿಸಬಹುದು. ಆದರೆ, ಬಟ್ಟೆ, ಆಭರಣ ಮಳಿಗೆ ಹಾಗೂ ಶೋರೂಂ ಬಾಗಿಲು ತೆರೆಯಲು ಅವಕಾಶ ಇಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಹಿತಿ ನೀಡಿದ್ದಾರೆ.</p>.<p>‘ಮದುವೆ ಸಮಾರಂಭಗಳಿಗೆ 40 ಹಾಗೂ ಅಂತ್ಯಕ್ರಿಯೆಗೆ 5 ಮಂದಿಗೆ ಪಾಲ್ಗೊಳ್ಳಬಹುದು. ಇದಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಸಂಜೆ 7 ಗಂಟೆಯ ಒಳಗೆ ಮನೆ ಸೇರಿಸಿಕೊಳ್ಳಬೇಕು. ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ಸಂಚರಿಸಬಾರದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>***</p>.<p>ಕೋವಿಡ್ ನಿಯಂತ್ರಣಕ್ಕೆ ನಿರ್ಬಂಧ ಅನಿವಾರ್ಯ. ಜುಲೈ 5ರವರೆಗೆ ಯಥಾಸ್ಥಿತಿ ಮುಂದುವರಿಯಲಿದೆ. ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.</p>.<p>ಕವಿತಾ ಎಸ್.ಮನ್ನಿಕೇರಿ<br />ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>