ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಪೊಲೀಸ್‌ ವಶದಲ್ಲಿದ್ದ ಆರೋಪಿ ಸಾವು; ಲಾಕಪ್‌ಡೆತ್‌ ಆರೋಪ

Last Updated 13 ಜನವರಿ 2021, 9:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಆಂತರಿಕ ಭದ್ರತಾ ಪಡೆಯ ವಶದಲ್ಲಿದ್ದ ಆರೋಪಿಯೊಬ್ಬರು ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಲಾಕಪ್‌ಡೆತ್‌ ಆರೋಪ ಕೇಳಿಬಂದಿದೆ.

ನಗರದ ಅಗಳೇರಿ ಬಡಾವಣೆಯ ಶಿವಾಜಿರಾವ್ (47) ಮೃತ ವ್ಯಕ್ತಿ. ಗಾಂಜಾ ಮಾರಾಟ ಆರೋಪದ ಮೇರೆಗೆ ಮಂಗಳವಾರ ಸಂಜೆ ಪೊಲೀಸರು ವಶಕ್ಕೆ ಪಡೆದಿದ್ದರು.

‘ಪೊಲೀಸರು ಮನೆಗೆ ಬಂದು ಪತಿಯನ್ನು ಬಂಧಿಸಿದ್ದರು. ರಾತ್ರಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಚಿತ್ರಹಿಂಸೆ ನೀಡಿ ಲಾಕಪ್‌ಡೆತ್‌ ಮಾಡಲಾಗಿದೆ’ ಎಂದು ಶಿವಾಜಿರಾವ್‌ ಪತ್ನಿ ಗೀತಾಬಾಯಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT