<p><strong>ಚಿತ್ರದುರ್ಗ: </strong>ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಲೋಕ ಅದಾಲತ್’ನಲ್ಲಿ ಒಟ್ಟು 3,577 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.</p>.<p>ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಂದೇ ದಿನ ಇಷ್ಟೊಂದು ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾಗಿದ್ದು, ಅದಾಲತ್ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿರುವುದು ನ್ಯಾಯಾಂಗ ಇಲಾಖೆಯಲ್ಲಿ ಸಂತಸ ಮೂಡಿಸಿದೆ.</p>.<p>ಜಿಲ್ಲಾ ಕೇಂದ್ರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ವೈ. ವಟವಟಿ ನೇತೃತ್ವದಲ್ಲಿ ಅದಾಲತ್ ನಡೆಯಿತು. ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 28,982 ಪ್ರಕರಣಗಳ ಪೈಕಿ 4,935 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 3,577 ಪ್ರಕರಣ ರಾಜಿ ಮೂಲಕ ಇತ್ಯರ್ಥಗೊಳಿಸಿ, ₹ 8.37 ಕೋಟಿ ಹಣವನ್ನು ಸಂಬಂಧಿಸಿದವರಿಗೆ ಕೊಡಿಸಲಾಯಿತು.</p>.<p>865 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 112 ಪ್ರಕರಣಗಳೊಂದಿಗೆ ₹ 1.15 ಕೋಟಿ ಹಣವನ್ನು ಇತ್ಯರ್ಥಗೊಳಿಸಲಾಯಿತು. ಅದಾಲತ್ನಲ್ಲಿ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್ ಮತ್ತು ನೀರಿನ ಶುಲ್ಕ ಪ್ರಕರಣ ಸೇರಿ ಇತರೆ ವ್ಯಾಜ್ಯ ಪೂರ್ವ ಪ್ರಕರಣಗಳು ಅದಾಲತ್ಗೆ ಆಯ್ಕೆಯಾಗಿದ್ದವು.</p>.<p>ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟರು ವಾಹನ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣ, ಕಂದಾಯ ಪ್ರಕರಣ, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಸೇರಿ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅನೇಕ ಪ್ರಕರಣಗಳು ಇತ್ಯರ್ಥಗೊಂಡವು.</p>.<p>ಅದಾಲತ್ಗೆ 20 ಪೀಠಗಳನ್ನು ಸ್ಥಾಪಿಸಲಾಗಿತ್ತು. ಚಿತ್ರದುರ್ಗದಲ್ಲಿ 10 ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 10 ಪೀಠಗಳು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಕಾರ್ಯ ನಿರ್ವಹಿಸಿದವು. ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರು ಪಾಲ್ಗೊಂಡು ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿದರು.</p>.<p>ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಅದಾಲತ್ನಲ್ಲಿ ಕೈಗೆತ್ತಿಕೊಳ್ಳಲಾಗಿದೆ. ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ನೂರಾರು ಜನ ಮುಂದೆ ಬರುತ್ತಿದ್ದಾರೆ. ಇದರಿಂದ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯ ಆಗಲಿದೆ ಎಂದು ನ್ಯಾಯಾಧೀಶರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಲೋಕ ಅದಾಲತ್’ನಲ್ಲಿ ಒಟ್ಟು 3,577 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.</p>.<p>ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಂದೇ ದಿನ ಇಷ್ಟೊಂದು ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾಗಿದ್ದು, ಅದಾಲತ್ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿರುವುದು ನ್ಯಾಯಾಂಗ ಇಲಾಖೆಯಲ್ಲಿ ಸಂತಸ ಮೂಡಿಸಿದೆ.</p>.<p>ಜಿಲ್ಲಾ ಕೇಂದ್ರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ವೈ. ವಟವಟಿ ನೇತೃತ್ವದಲ್ಲಿ ಅದಾಲತ್ ನಡೆಯಿತು. ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 28,982 ಪ್ರಕರಣಗಳ ಪೈಕಿ 4,935 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 3,577 ಪ್ರಕರಣ ರಾಜಿ ಮೂಲಕ ಇತ್ಯರ್ಥಗೊಳಿಸಿ, ₹ 8.37 ಕೋಟಿ ಹಣವನ್ನು ಸಂಬಂಧಿಸಿದವರಿಗೆ ಕೊಡಿಸಲಾಯಿತು.</p>.<p>865 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 112 ಪ್ರಕರಣಗಳೊಂದಿಗೆ ₹ 1.15 ಕೋಟಿ ಹಣವನ್ನು ಇತ್ಯರ್ಥಗೊಳಿಸಲಾಯಿತು. ಅದಾಲತ್ನಲ್ಲಿ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್ ಮತ್ತು ನೀರಿನ ಶುಲ್ಕ ಪ್ರಕರಣ ಸೇರಿ ಇತರೆ ವ್ಯಾಜ್ಯ ಪೂರ್ವ ಪ್ರಕರಣಗಳು ಅದಾಲತ್ಗೆ ಆಯ್ಕೆಯಾಗಿದ್ದವು.</p>.<p>ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟರು ವಾಹನ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣ, ಕಂದಾಯ ಪ್ರಕರಣ, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಸೇರಿ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅನೇಕ ಪ್ರಕರಣಗಳು ಇತ್ಯರ್ಥಗೊಂಡವು.</p>.<p>ಅದಾಲತ್ಗೆ 20 ಪೀಠಗಳನ್ನು ಸ್ಥಾಪಿಸಲಾಗಿತ್ತು. ಚಿತ್ರದುರ್ಗದಲ್ಲಿ 10 ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 10 ಪೀಠಗಳು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಕಾರ್ಯ ನಿರ್ವಹಿಸಿದವು. ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರು ಪಾಲ್ಗೊಂಡು ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿದರು.</p>.<p>ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಅದಾಲತ್ನಲ್ಲಿ ಕೈಗೆತ್ತಿಕೊಳ್ಳಲಾಗಿದೆ. ರಾಜಿ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ನೂರಾರು ಜನ ಮುಂದೆ ಬರುತ್ತಿದ್ದಾರೆ. ಇದರಿಂದ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯ ಆಗಲಿದೆ ಎಂದು ನ್ಯಾಯಾಧೀಶರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>