ಜಿಲ್ಲೆಯಲ್ಲಿ 36,577 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ. ಸಂಧಾನದ ಮೂಲಕ ಇತ್ಯರ್ಥಪಡಿಸಬಲ್ಲ ಪ್ರಕರಣಗಳನ್ನು ಮಾತ್ರ ಅದಾಲತ್ನಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಇದರಲ್ಲಿ 2,379 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಅಪಘಾತ ಪರಿಹಾರ, ಕಂದಾಯ ಪ್ರಕರಣ, ಚೆಕ್ಬೌನ್ಸ್, ಬ್ಯಾಂಕ್ ವಸೂಲಾತಿ, ನೀರು ಹಾಗೂ ವಿದ್ಯುತ್ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.