<p><strong>ಚಿತ್ರದುರ್ಗ: </strong>ಹೊಸದುರ್ಗ ತಾಲ್ಲೂಕು ‘ಬೆಸ್ಕಾಂ’ ಎಇಇ ತಿರುಪತಿ ನಾಯ್ಕ್ ವಿದ್ಯುತ್ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಹೊಸದುರ್ಗ ತಾಲ್ಲೂಕಿನ ಜೋಡಿ ರಂಗಾಪುರ ಗೊಲ್ಲರಹಟ್ಟಿಯ ಎ.ಸತೀಶ್ ಎಂಬುವರ ಮನೆ ಹಾಗೂ ಕುರಿ ಫಾರಂಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಎ.ಟಿ.ಕುಮಾರ್ ಎಂಬುವವರು ಗುತ್ತಿಗೆ ಪಡೆದಿದ್ದರು. ಫೈಲ್ಗೆ ಸಹಿ ಹಾಕಲು ತಿರುಪತಿ ₹ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೆಲ ಸುತ್ತಿನ ಮಾತುಕತೆಯ ಬಳಿಕ ಲಂಚದ ಮೊತ್ತವನ್ನು ತಿರುಪತಿ ₹ 20 ಸಾವಿರಕ್ಕೆ ಕಡಿಮೆ ಮಾಡಿಕೊಂಡಿದ್ದರು. ಆರಂಭದಲ್ಲಿ ₹ 10 ಸಾವಿರ ಹಾಗೂ ಫೈಲ್ ಚಿತ್ರದುರ್ಗ ಕಚೇರಿಯಿಂದ ಮರಳಿದ ಬಳಿಕ ₹ 10 ಸಾವಿರ ನೀಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದ್ದರು. ಲಂಚ ನೀಡಲು ಇಷ್ಟವಿರದ ಕುಮಾರ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>ತಿರುಪತಿ ಗುರುವಾರ ಲಂಚದ ಹಣವನ್ನು ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ರೂಪದಲ್ಲಿ ಪಡೆದ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ವಾಸುದೇವರಾಮ್ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ತನಿಖೆಯ ಹೊಣೆಯನ್ನು ಡಿವೈಎಸ್ಪಿ ಎನ್.ಮೃತ್ಯುಂಜಯ ಅವರಿಗೆ ವಹಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹೊಸದುರ್ಗ ತಾಲ್ಲೂಕು ‘ಬೆಸ್ಕಾಂ’ ಎಇಇ ತಿರುಪತಿ ನಾಯ್ಕ್ ವಿದ್ಯುತ್ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಹೊಸದುರ್ಗ ತಾಲ್ಲೂಕಿನ ಜೋಡಿ ರಂಗಾಪುರ ಗೊಲ್ಲರಹಟ್ಟಿಯ ಎ.ಸತೀಶ್ ಎಂಬುವರ ಮನೆ ಹಾಗೂ ಕುರಿ ಫಾರಂಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಎ.ಟಿ.ಕುಮಾರ್ ಎಂಬುವವರು ಗುತ್ತಿಗೆ ಪಡೆದಿದ್ದರು. ಫೈಲ್ಗೆ ಸಹಿ ಹಾಕಲು ತಿರುಪತಿ ₹ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೆಲ ಸುತ್ತಿನ ಮಾತುಕತೆಯ ಬಳಿಕ ಲಂಚದ ಮೊತ್ತವನ್ನು ತಿರುಪತಿ ₹ 20 ಸಾವಿರಕ್ಕೆ ಕಡಿಮೆ ಮಾಡಿಕೊಂಡಿದ್ದರು. ಆರಂಭದಲ್ಲಿ ₹ 10 ಸಾವಿರ ಹಾಗೂ ಫೈಲ್ ಚಿತ್ರದುರ್ಗ ಕಚೇರಿಯಿಂದ ಮರಳಿದ ಬಳಿಕ ₹ 10 ಸಾವಿರ ನೀಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದ್ದರು. ಲಂಚ ನೀಡಲು ಇಷ್ಟವಿರದ ಕುಮಾರ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>ತಿರುಪತಿ ಗುರುವಾರ ಲಂಚದ ಹಣವನ್ನು ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ರೂಪದಲ್ಲಿ ಪಡೆದ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ವಾಸುದೇವರಾಮ್ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ತನಿಖೆಯ ಹೊಣೆಯನ್ನು ಡಿವೈಎಸ್ಪಿ ಎನ್.ಮೃತ್ಯುಂಜಯ ಅವರಿಗೆ ವಹಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>