<p>ಚಳ್ಳಕೆರೆ: ಸಾರ್ವಜನಿಕರು ಸಲ್ಲಿಸಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ತಾಲ್ಲೂಕು ಕಚೇರಿ ಮತ್ತು ಉಪ ನೋಂದಣಿ ಕಚೇರಿ ಮೇಲೆ ಶನಿವಾರ ದಿಢೀರ್ ದಾಳಿ ನಡೆಸಿ ಒಂದೆರೆಡು ಗಂಟೆ ಕಾಲ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿತು.</p>.<p>‘ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯದ ವ್ಯವಸ್ಥೆ ಇಲ್ಲ. ಮತ್ತು ಸಣ್ಣ ಪುಟ್ಟ ಕೆಲಸಕ್ಕೂ ಜನರಿಂದ ಹಣ ವಸೂಲಿ ಮಾಡುತ್ತಾರೆ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿ ಎದುರೇ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ಮಾತನಾಡಿ, ‘ಸಾರ್ವಜನಿಕ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸಬೇಕು. ಅಲ್ಲದೆ ಕೆಲಸದ ನಿಮಿತ್ತ ಬರುವ ಜನರಿಗೆ ಇಲಾಖೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಲೋಕಾಯುಕ್ತ ಇನ್ಸ್ಪೆಕ್ಟರ್ ಮುಸ್ತಾಕ್ ಅಹಮದ್, ಬಸವರಾಜ ಲಮಾಣಿ, ಸತೀಶ್, ವೀರೇಶ್, ರಾಜೇಶ್, ವೆಂಕಟೇಶ್ ಕುಮಾರ್, ಪುಷ್ಪಾ ಮಾರುತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಸಾರ್ವಜನಿಕರು ಸಲ್ಲಿಸಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ತಾಲ್ಲೂಕು ಕಚೇರಿ ಮತ್ತು ಉಪ ನೋಂದಣಿ ಕಚೇರಿ ಮೇಲೆ ಶನಿವಾರ ದಿಢೀರ್ ದಾಳಿ ನಡೆಸಿ ಒಂದೆರೆಡು ಗಂಟೆ ಕಾಲ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿತು.</p>.<p>‘ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯದ ವ್ಯವಸ್ಥೆ ಇಲ್ಲ. ಮತ್ತು ಸಣ್ಣ ಪುಟ್ಟ ಕೆಲಸಕ್ಕೂ ಜನರಿಂದ ಹಣ ವಸೂಲಿ ಮಾಡುತ್ತಾರೆ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿ ಎದುರೇ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದರು.</p>.<p>ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ಮಾತನಾಡಿ, ‘ಸಾರ್ವಜನಿಕ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸಬೇಕು. ಅಲ್ಲದೆ ಕೆಲಸದ ನಿಮಿತ್ತ ಬರುವ ಜನರಿಗೆ ಇಲಾಖೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಲೋಕಾಯುಕ್ತ ಇನ್ಸ್ಪೆಕ್ಟರ್ ಮುಸ್ತಾಕ್ ಅಹಮದ್, ಬಸವರಾಜ ಲಮಾಣಿ, ಸತೀಶ್, ವೀರೇಶ್, ರಾಜೇಶ್, ವೆಂಕಟೇಶ್ ಕುಮಾರ್, ಪುಷ್ಪಾ ಮಾರುತಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>