<p>ಹೊಸದುರ್ಗ: ತಾಲ್ಲೂಕಿನ ಮಾಡದಕೆರೆ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ಅಕ್ರಮವಾಗಿ ಕಬ್ಬಿಣದ ಅದಿರು ಹೊಂದಿರುವ ಮಣ್ಣನ್ನು ಲಾರಿಗೆ ತುಂಬುತ್ತಿದ್ದ ಮೂವರನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಹೊರಪೇಟೆಯ ನಿವಾಸಿ ಮಹಮ್ಮದ್ ತನ್ವೀರ್, ಮೊಳಕಾಲ್ಮುರು ತಾಲ್ಲೂಕಿನ ಬಿಜಿಕೆರೆ ಗ್ರಾಮದ ಸಮೀವುಲ್ಲಾ, ದಾವಣಗೆರೆ ನಗರದ ಮುಜಾಮಿಲ್ಲಾ ಬಂಧಿತರು.</p>.<p>ತಾಲ್ಲೂಕಿನ ಮಾಡದಕೆರೆ ಹೊರವಲಯದಲ್ಲಿ ಒಂದು ವಾರದ ಹಿಂದೆ ಈ ಮಣ್ಣು ಸಾಗಿಸಲಾಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರ ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಅದಿರು ಕಳವು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಹೊಸದುರ್ಗ ವಲಯ ಅರಣ್ಯ ಇಲಾಖೆ ಅಧಿಕಾರಿಗಳು 35 ಟನ್ ಅದಿರು, 4 ಲಾರಿ, 1 ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಆರ್ಎಫ್ಒ ಸುನೀಲ್ ಕುಮಾರ್, ಡಿಆರ್ಎಫ್ಒ ಪ್ರಸನ್ನ, ಯೋಗೀಶ್, ಈಶ್ವರನಾಯ್ಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ತಾಲ್ಲೂಕಿನ ಮಾಡದಕೆರೆ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ಅಕ್ರಮವಾಗಿ ಕಬ್ಬಿಣದ ಅದಿರು ಹೊಂದಿರುವ ಮಣ್ಣನ್ನು ಲಾರಿಗೆ ತುಂಬುತ್ತಿದ್ದ ಮೂವರನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಹೊರಪೇಟೆಯ ನಿವಾಸಿ ಮಹಮ್ಮದ್ ತನ್ವೀರ್, ಮೊಳಕಾಲ್ಮುರು ತಾಲ್ಲೂಕಿನ ಬಿಜಿಕೆರೆ ಗ್ರಾಮದ ಸಮೀವುಲ್ಲಾ, ದಾವಣಗೆರೆ ನಗರದ ಮುಜಾಮಿಲ್ಲಾ ಬಂಧಿತರು.</p>.<p>ತಾಲ್ಲೂಕಿನ ಮಾಡದಕೆರೆ ಹೊರವಲಯದಲ್ಲಿ ಒಂದು ವಾರದ ಹಿಂದೆ ಈ ಮಣ್ಣು ಸಾಗಿಸಲಾಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರ ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಅದಿರು ಕಳವು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಹೊಸದುರ್ಗ ವಲಯ ಅರಣ್ಯ ಇಲಾಖೆ ಅಧಿಕಾರಿಗಳು 35 ಟನ್ ಅದಿರು, 4 ಲಾರಿ, 1 ಜೆಸಿಬಿಯನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಆರ್ಎಫ್ಒ ಸುನೀಲ್ ಕುಮಾರ್, ಡಿಆರ್ಎಫ್ಒ ಪ್ರಸನ್ನ, ಯೋಗೀಶ್, ಈಶ್ವರನಾಯ್ಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>