ಈ ಹಿಂದೆ ಸೌತೆಕಾಯಿ, ಬಟಾಣಿ, ಬೀನ್ಸ್, ಕ್ಯಾರೆಟ್ ಕೃಷಿ ಮಾಡಿದರೆ ಒಂದರಲ್ಲಿ ಉತ್ತಮ ಲಾಭಾಂಶ ಬಂದರೆ, ಕೆಲವೊಂದು ತರಕಾರಿಗಳಿಂದ ನಷ್ಟವೇ ಹೆಚ್ಚಾಗಿ ಹೋಯಿತು. ಕೊನೆಗೆ ಕಂಡುಕೊಂಡಿದ್ದು, ಚೆಂಡು ಹೂವಿನ ಕೃಷಿ. ಬಸವರಾಜು ಅವರು 15 ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಎರಡರಲ್ಲಿ ಮಾತ್ರ ನೀರು ಬಂದಿತ್ತು. ಆದರೂ ಮಳೆಯ ನೀರನ್ನೂ ಆಶ್ರಯಿಸಿ ಪ್ರಥಮ ಬಾರಿಗೆ ಚೆಂಡು ಹೂವು ಬೆಳೆ ತೆಗೆದಿದ್ದಾರೆ.