‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಕಲ್ಪಿಸಿ ಜನರ ನೋವಿಗೆ ಸ್ಪಂದಿಸಿದ್ದಾರೆ. ಬಿಜೆಪಿ ಸರ್ಕಾರ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊಟ್ಟೆ ಎಸೆತ, ಮಾಂಸಾಹಾರ, ಸಾವರ್ಕರ್ ಭಾವಚಿತ್ರದಂತಹ ವಿಷಯಗಳನ್ನು ಕೈಗೆತ್ತಿಕೊಂಡು ವಿವಾದ ಸೃಷ್ಟಿಸುತ್ತಿದೆ. ಇದರಿಂದ ಜನರ ಹುಟ್ಟೆ ತುಂಬುತ್ತದೆಯೇ’ ಎಂದು ಪ್ರಶ್ನಿಸಿದರು.