<p><strong>ಚಿತ್ರದುರ್ಗ:</strong> ‘ಮದಕರಿ ನಾಯಕ’ ಸಿನಿಮಾದ ನಾಯಕ ನಟನ ಪಾತ್ರವನ್ನು ಚಿತ್ರನಟ ದರ್ಶನ್ ಬದಲಿಗೆ ಸುದೀಪ್ಗೆ ನೀಡಬೇಕು ಎಂಬ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆಗೆ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಅಂಜಿನಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಸಮಾಜದ ಗುರುಗಳು ಈ ರೀತಿ ಹೇಳಿಕೆ ನೀಡಿದ್ದು ತಪ್ಪು. ಕಲಾವಿದರು ಹಾಗೂ ಕಲೆಗೆ ಜಾತಿ ಬಣ್ಣ ಕಟ್ಟಿ ಸಮಾಜಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಮದಕರಿ ನಾಯಕನ ಪಾತ್ರವನ್ನು ಯಾವ ನಟ ನಿರ್ವಹಿಸಬೇಕು ಎಂಬ ಗೊಂದಲವನ್ನು ವಿನಾ ಕಾರಣ ಹುಟ್ಟುಹಾಕಲಾಗಿದೆ. ಚಿತ್ರನಟ ಸುದೀಪ್ ಹಾಗೂ ದರ್ಶನ್ ಬಗ್ಗೆ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು ಬೇಸರ ಮೂಡಿಸಿವೆ’ ಎಂದರು.</p>.<p>‘ಬಿಚ್ಚುಗತ್ತಿ ಭರಮಣ್ಣ ನಾಯಕ ಚಿತ್ರವನ್ನು ಹಂಸಲೇಖ ಹಾಗೂ ಮದಕರಿ ನಾಯಕ ಚಿತ್ರವನ್ನು ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ಯಾರು ಸೂಕ್ತವಾಗುತ್ತಾರೋ ಅಂಥವರನ್ನು ನಿರ್ದೇಶಕರು, ನಿರ್ಮಾಪಕರು ಆಯ್ಕೆ ಮಾಡುತ್ತಾರೆ. ಪೌರಾಣಿಕ ಕಥೆಗಳಿಗೆ ಜಾತಿ ಬಣ್ಣ ಕಟ್ಟಬಾರದು’ ಎಂದರು.</p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರನ್ನು ಟೀಕಿಸುವುದು ನಿಲ್ಲಬೇಕು. ಟೀಕೆಗಳಿಂದ ಕಲಾವಿದರಿಗೆ ನೋವಾಗಿದ್ದರೆ ಸಮಾಜದ ಪರವಾಗಿ ಕ್ಷಮೆಯಾಚಿಸುತ್ತೇನೆ. ಮದಕರಿ ನಾಯಕ ಪಾತ್ರದ ಕುರಿತು ಗೊಂದಲ ಮೂಡಿಸುತ್ತಿರುವವರು ಸಮಾಜ ಒಳಿತಿಗಾಗಿ ಹೋರಾಟ ಮಾಡಲಿ’ ಎಂದು ಸಲಹೆ ನೀಡಿದರು.</p>.<p>ಬಿ.ಟಿ. ಜಗದೀಶ್, ಶಶಿ, ಸಂತೋಷ್, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಮದಕರಿ ನಾಯಕ’ ಸಿನಿಮಾದ ನಾಯಕ ನಟನ ಪಾತ್ರವನ್ನು ಚಿತ್ರನಟ ದರ್ಶನ್ ಬದಲಿಗೆ ಸುದೀಪ್ಗೆ ನೀಡಬೇಕು ಎಂಬ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆಗೆ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್. ಅಂಜಿನಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಸಮಾಜದ ಗುರುಗಳು ಈ ರೀತಿ ಹೇಳಿಕೆ ನೀಡಿದ್ದು ತಪ್ಪು. ಕಲಾವಿದರು ಹಾಗೂ ಕಲೆಗೆ ಜಾತಿ ಬಣ್ಣ ಕಟ್ಟಿ ಸಮಾಜಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಮದಕರಿ ನಾಯಕನ ಪಾತ್ರವನ್ನು ಯಾವ ನಟ ನಿರ್ವಹಿಸಬೇಕು ಎಂಬ ಗೊಂದಲವನ್ನು ವಿನಾ ಕಾರಣ ಹುಟ್ಟುಹಾಕಲಾಗಿದೆ. ಚಿತ್ರನಟ ಸುದೀಪ್ ಹಾಗೂ ದರ್ಶನ್ ಬಗ್ಗೆ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು ಬೇಸರ ಮೂಡಿಸಿವೆ’ ಎಂದರು.</p>.<p>‘ಬಿಚ್ಚುಗತ್ತಿ ಭರಮಣ್ಣ ನಾಯಕ ಚಿತ್ರವನ್ನು ಹಂಸಲೇಖ ಹಾಗೂ ಮದಕರಿ ನಾಯಕ ಚಿತ್ರವನ್ನು ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ಯಾರು ಸೂಕ್ತವಾಗುತ್ತಾರೋ ಅಂಥವರನ್ನು ನಿರ್ದೇಶಕರು, ನಿರ್ಮಾಪಕರು ಆಯ್ಕೆ ಮಾಡುತ್ತಾರೆ. ಪೌರಾಣಿಕ ಕಥೆಗಳಿಗೆ ಜಾತಿ ಬಣ್ಣ ಕಟ್ಟಬಾರದು’ ಎಂದರು.</p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರನ್ನು ಟೀಕಿಸುವುದು ನಿಲ್ಲಬೇಕು. ಟೀಕೆಗಳಿಂದ ಕಲಾವಿದರಿಗೆ ನೋವಾಗಿದ್ದರೆ ಸಮಾಜದ ಪರವಾಗಿ ಕ್ಷಮೆಯಾಚಿಸುತ್ತೇನೆ. ಮದಕರಿ ನಾಯಕ ಪಾತ್ರದ ಕುರಿತು ಗೊಂದಲ ಮೂಡಿಸುತ್ತಿರುವವರು ಸಮಾಜ ಒಳಿತಿಗಾಗಿ ಹೋರಾಟ ಮಾಡಲಿ’ ಎಂದು ಸಲಹೆ ನೀಡಿದರು.</p>.<p>ಬಿ.ಟಿ. ಜಗದೀಶ್, ಶಶಿ, ಸಂತೋಷ್, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>