<p><strong>ಧರ್ಮಪುರ</strong>: ಸಮೀಪದ ಮ್ಯಾದನಹೊಳೆ ಮತ್ತು ಸಮುದ್ರದಹಳ್ಳಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಶನಿವಾರ ಮತ್ತು ಭಾನುವಾರ ಸುರಿದ ಮಳೆಗೆ ಪರಿಕರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.</p>.<p>ಸುವರ್ಣಮುಖಿ ನದಿಗೆ ಈ ಹಿಂದೆ ಕಟ್ಟಿದ್ದ ಸೇತುವೆ 2022ರಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದು ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಆಗ ರೈತಸಂಘ ಮತ್ತು ಈ ಭಾಗದ ಗ್ರಾಮಸ್ಥರು ಹಿರಿಯೂರಿಗೆ ಹೋಗಲು ಪ್ರಯಾಸ ಪಡಬೇಕಿತ್ತು. ಜೂನ್ನಲ್ಲಿ ಸುಮಾರು ₹ 9.75 ಕೋಟಿ ವೆಚ್ಚದಲ್ಲಿ ಆರಂಭವಾದ ಸೇತುವೆ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಎರಡು ದಿನ ಸುರಿದ ಮಳೆಗೆ ಸೆಂಟ್ರಿಂಗ್ ಶೀಟ್, ಮರಳು, ಕಬ್ಬಿಣದ ರಾಡು, ಸಂಗ್ರಹಿಸಿಟ್ಟಿದ್ದ ನೂರಾರು ಚೀಲ ಸಿಮೆಂಟ್ ನೀರಿನಲ್ಲಿ ಕೊಚ್ಚಿಹೋಗಿವೆ. ಉಳಿದವು ತೊಯ್ದು ಹಾಳಾಗಿವೆ.</p>.<p>ಹೂವಿನಹೊಳೆ ಮತ್ತು ಇಕ್ಕನೂರು ಪ್ರದೇಶದಲ್ಲಿ ಹೆಚ್ಚು ಮಳೆ ಸುರಿದಿದ್ದರಿಂದ ಹತ್ತಿ, ಈರುಳ್ಳಿ, ಮೆಕ್ಕೆಜೋಳ ಹಾನಿಯಾಗಿದೆ ಎಂದು ರೈತ ಹೂವಿನಹೊಳೆ ರವೀಂದ್ರಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ</strong>: ಸಮೀಪದ ಮ್ಯಾದನಹೊಳೆ ಮತ್ತು ಸಮುದ್ರದಹಳ್ಳಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಶನಿವಾರ ಮತ್ತು ಭಾನುವಾರ ಸುರಿದ ಮಳೆಗೆ ಪರಿಕರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.</p>.<p>ಸುವರ್ಣಮುಖಿ ನದಿಗೆ ಈ ಹಿಂದೆ ಕಟ್ಟಿದ್ದ ಸೇತುವೆ 2022ರಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದು ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಆಗ ರೈತಸಂಘ ಮತ್ತು ಈ ಭಾಗದ ಗ್ರಾಮಸ್ಥರು ಹಿರಿಯೂರಿಗೆ ಹೋಗಲು ಪ್ರಯಾಸ ಪಡಬೇಕಿತ್ತು. ಜೂನ್ನಲ್ಲಿ ಸುಮಾರು ₹ 9.75 ಕೋಟಿ ವೆಚ್ಚದಲ್ಲಿ ಆರಂಭವಾದ ಸೇತುವೆ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಎರಡು ದಿನ ಸುರಿದ ಮಳೆಗೆ ಸೆಂಟ್ರಿಂಗ್ ಶೀಟ್, ಮರಳು, ಕಬ್ಬಿಣದ ರಾಡು, ಸಂಗ್ರಹಿಸಿಟ್ಟಿದ್ದ ನೂರಾರು ಚೀಲ ಸಿಮೆಂಟ್ ನೀರಿನಲ್ಲಿ ಕೊಚ್ಚಿಹೋಗಿವೆ. ಉಳಿದವು ತೊಯ್ದು ಹಾಳಾಗಿವೆ.</p>.<p>ಹೂವಿನಹೊಳೆ ಮತ್ತು ಇಕ್ಕನೂರು ಪ್ರದೇಶದಲ್ಲಿ ಹೆಚ್ಚು ಮಳೆ ಸುರಿದಿದ್ದರಿಂದ ಹತ್ತಿ, ಈರುಳ್ಳಿ, ಮೆಕ್ಕೆಜೋಳ ಹಾನಿಯಾಗಿದೆ ಎಂದು ರೈತ ಹೂವಿನಹೊಳೆ ರವೀಂದ್ರಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>