ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ, ಗೊಲ್ಲ ಸಮುದಾಯದ ಜಯಮ್ಮ ಬಾಲರಾಜ್ ಅವರಿಗೆ ಜೆಡಿಎಸ್– ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಯಾದವ ಯುವ ಸೇನೆ ಆಗ್ರಹಿಸಿದೆ.
‘ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಅಮ್ಮನಹಟ್ಟಿ ಹರೀಶ್ ಶುಕ್ರವಾರ ಇಲ್ಲಿ ತಿಳಿಸಿದರು.