<p><strong>ಚಳ್ಳಕೆರೆ:</strong> ಅವ್ಯವಹಾರದಲ್ಲಿ ಭಾಗಿಯಾಗಿರುವ ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ನಿರ್ದೇಶಕ ಯುವರಾಜ ಅಮಾನತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯದೊಂದಿಗೆ ಮಂಗಳವಾರ ಮೆರವಣಿಗೆ ನಡೆಸಿದರು. </p>.<p>ಯುವರಾಜ ಅವರು ವೈದ್ಯರ ನೇಮಕಾತಿಗೆ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದಾರೆ. ಹೀಗಾಗಿ ಈ ಅವ್ಯವಹಾರ ಪ್ರಕರಣವನ್ನು ಲೋಕಾಯುಕ್ತ, ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಮಾಂಜನೇಯ ಒತ್ತಾಯಿಸಿದರು.</p>.<p>ಪ್ರಕರಣದ ತನಿಖೆಯಾಗುವವರೆಗೆ ನಿರ್ದೇಶಕರನ್ನು ಅಮಾನತಿನಲ್ಲಿಡಬೇಕು. ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಅರ್ಹರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಯುವಸೇನೆ ಮುಖಂಡ ಡಿ.ಬಸವರಾಜ ಮನವಿ ಮಾಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ ಮನವಿ ಸ್ವೀಕರಿಸಿದರು. ಕಾರ್ಯಕರ್ತರಾದ ತಿಪ್ಪೇಸ್ವಾಮಿ, ತಾರಕೇಶ, ಪೆನ್ನಯ್ಯ, ಮೂಡಲಗಿರಿಯಪ್ಪ, ರಾಜ, ಮಂಜುನಾಥ, ವೆಂಕಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಅವ್ಯವಹಾರದಲ್ಲಿ ಭಾಗಿಯಾಗಿರುವ ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ನಿರ್ದೇಶಕ ಯುವರಾಜ ಅಮಾನತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯದೊಂದಿಗೆ ಮಂಗಳವಾರ ಮೆರವಣಿಗೆ ನಡೆಸಿದರು. </p>.<p>ಯುವರಾಜ ಅವರು ವೈದ್ಯರ ನೇಮಕಾತಿಗೆ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದಾರೆ. ಹೀಗಾಗಿ ಈ ಅವ್ಯವಹಾರ ಪ್ರಕರಣವನ್ನು ಲೋಕಾಯುಕ್ತ, ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಮಾಂಜನೇಯ ಒತ್ತಾಯಿಸಿದರು.</p>.<p>ಪ್ರಕರಣದ ತನಿಖೆಯಾಗುವವರೆಗೆ ನಿರ್ದೇಶಕರನ್ನು ಅಮಾನತಿನಲ್ಲಿಡಬೇಕು. ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಅರ್ಹರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಯುವಸೇನೆ ಮುಖಂಡ ಡಿ.ಬಸವರಾಜ ಮನವಿ ಮಾಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ ಮನವಿ ಸ್ವೀಕರಿಸಿದರು. ಕಾರ್ಯಕರ್ತರಾದ ತಿಪ್ಪೇಸ್ವಾಮಿ, ತಾರಕೇಶ, ಪೆನ್ನಯ್ಯ, ಮೂಡಲಗಿರಿಯಪ್ಪ, ರಾಜ, ಮಂಜುನಾಥ, ವೆಂಕಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>