ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲ್ಲೂಕಿನ ಹೆಬ್ಬಾಳು ವಿರಕ್ತ ಮಠದ ಮಹಾಂತರುದ್ರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.
ಬಂಧನಕ್ಕೂ ಮೊದಲು ಮಠದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಠ ಅಧಿಕೃತ ಮಾಹಿತಿ ಹೊರಹಾಕಿಲ್ಲ.
ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಮಹಾಂತರುದ್ರ ಸ್ವಾಮೀಜಿ ಅವರು ಶರಣರ ಜೊತೆಗೆ ಇದ್ದರು. ಭಕ್ತರು, ಮಠಾಧೀಶರೊಂದಿಗೆ ಸರಣಿ ಸಭೆ ನಡೆಸಿದ ಶರಣರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದರು. ಮಠದ ಆಡಳಿತಾಧಿಕಾರಿ ಬಸವರಾಜನ್ ಹೆಸರು ಉಲ್ಲೇಖಿಸದೇ ಮಾಧ್ಯಮಗಳ ಎದುರು ಆಕ್ರೋಶ ಹೊರಹಾಕಿದ್ದರು.