ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಮಹಿಷ ಉತ್ಸವ ಸಾಂಕೇತಿಕ ಆಚರಣೆ

Published 18 ಅಕ್ಟೋಬರ್ 2023, 15:22 IST
Last Updated 18 ಅಕ್ಟೋಬರ್ 2023, 15:22 IST
ಅಕ್ಷರ ಗಾತ್ರ

ಚಿತ್ರದುರ್ಗ: ದಲಿತ ಪರ ಸಂಘಟನೆಗಳ ವತಿಯಿಂದ ಮಹಿಷ ಉತ್ಸವವನ್ನು ಬುಧವಾರ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಮಹಿಷ ಭಕ್ತರು ಮಹಿಷ ಹಾಗೂ ಬುದ್ದನ ಪರ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತ ತಲುಪಿದರು. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಒನಕೆ ಓಬವ್ವ ವೃತ್ತಕ್ಕೆ ಮರಳಿ ಮಹಿಷ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರ.

‘ಮಹಿಷ ಉತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಗಿದೆ. ಮುಂದೆ ಇದನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು’ ಎಂದು ದಲಿತ ಸಂಘರ್ಷ ಸಮಿತಿಯ ಬಾಳೆಕಾಯಿ ಶ್ರೀನಿವಾಸ್‌ ಹೇಳಿದರು.

ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಶಿವಕುಮಾರ್‌ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ಘಟಕದ ಅಧ್ಯಕ್ಷ ಮಹಲಿಂಗಪ್ಪ, ಉಪಾಧ್ಯಕ್ಷ ಕೆ.ರಾಜಣ್ಣ, ದಲಿತ ಒಕ್ಕೂಟಗಳ ಅಧ್ಯಕ್ಷ ಮಹಾಂತೇಶ್‌, ಟಿಪ್ಪು ಖಾಸಿಂ ಅಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT