ಶನಿವಾರ ರಾಷ್ಟ್ರೀಯ ಹೆದ್ದಾರಿ ಕಾರ್ಯಾಲಯ ಅಧಿಕಾರಿಗಳು ಪಟ್ಟಣಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದರು. ನಂತರ ‘ಪ್ರಜಾವಾಣಿ’ ಜತೆ ಮಾತನಾಡಿದ ಕಾರ್ಯಾಲಯದ ಸಹಾಯಕ ಎಂಜಿನಿಯರ್ ನರೇಂದ್ರ, ‘ಈ ಹಿಂದೆಯೇ ಈ ರಸ್ತೆ ವಿಸ್ತರಣೆ ಅನುಮೋದನೆಗಾಗಿ ದೆಹಲಿಯ ಕಾರ್ಯಲಯಕ್ಕೆ ಕಳುಹಿಸಲಾಗಿತ್ತು. ಆದರೆ, ರಸ್ತೆ ಮಧ್ಯಭಾಗದಲ್ಲಿನ ಡಿವೈಡರ್ನಲ್ಲಿ ಅಳವಡಿಸುವ ವಿದ್ಯುತ್ ದೀಪಗಳ ನಿರ್ವಹಣೆ ಹಾಗೂ ವಿದ್ಯುತ್ ಕಂಬಗಳ ತೆರವು ಹೊಣೆಯನ್ನು ಪಟ್ಟಣ ಪಂಚಾಯಿತಿ ಮಾಡಲಿದೆ ಎಂಬ ಅನುಮತಿ ಪತ್ರ ಬೇಕು ಎಂಬ ಕಾರಣ ಮುಂದಿಟ್ಟು ಕಾಮಗಾರಿ ಸ್ಥಗಿತವಾಗಿದೆ. ಈ ಕುರಿತು ಅನುಮೋದನೆ ನೀಡುವಂತೆ ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿದೆ’ ಎಂದು ಹೇಳಿದರು.