‘ಜಿಲ್ಲೆಗೆ ಮಾದರಿಯಾಗುವ ರೀತಿಯಲ್ಲಿ ಪಟ್ಟಣದ ಮನೆ, ಮನೆ ಗಳಿಂದ ಅಂಗಡಿ–ಮುಂಗಟ್ಟುಗಳಿಂದ ಸಂಗ್ರಹಿಸಿದ ಘನತ್ಯಾಜ್ಯವನ್ನು ಹಸಿ ಮತ್ತು ಒಣಕಸವಾಗಿ ಬೇರ್ಪಡಿಸುತ್ತಿರುವುದು ಶ್ಲಾಘನೀಯ. ಈ ಹಸಿಕಸವನ್ನು ಕಾಂಪೋಸ್ಟ್ ಹಾಗೂ ಎರೆಹುಳು ಗೊಬ್ಬರವಾಗಿ ತಯಾರಿಸಿ, ಒಂದು ಟ್ರ್ಯಾಕ್ಟರ್ ಲೋಡ್ ಗೊಬ್ಬವನ್ನು ₹ 1,500ಕ್ಕೆ ಕಡಿಮೆ ದರದಲ್ಲಿ ರೈತರಿಗೆ ನೀಡುತ್ತಿರುವುದು ಮೆಚ್ಚುಗೆಯ ಸಂಗತಿ. ಒಣಕಸವನ್ನು ಸಂಸ್ಕರಿಸಿ ಮಾರಾಟ ಮಾಡುತ್ತಿರುವುದರಿಂದ ಪುರಸಭೆಯ ಆದಾಯ ವೃದ್ಧಿಗೆ ಸಹಕಾರಿಯಾಗಿದೆ’ ಎಂದು ತಿಳಿಸಿದರು.