<p><strong>ಚಿತ್ರದುರ್ಗ: </strong>ಜಿಲ್ಲೆಯ ಹಲವೆಡೆ ಗುರುವಾರ ಆಚರಿಸಲಿರುವ ಮಕರ ಸಂಕ್ರಾಂತಿ ಹಬ್ಬಕ್ಕೆ ಬೆಲೆ ಏರಿಕೆ ಲೆಕ್ಕಿಸದೇ ಕಬ್ಬು, ಎಳ್ಳು-ಬೆಲ್ಲ, ರೊಟ್ಟಿ ಖರೀದಿಸಲು ಜನರು ಮುಂದಾದರು.</p>.<p>ಹಬ್ಬಕ್ಕೆ ಕಬ್ಬನ್ನು ಖರೀದಿಸುವ ಸಂಪ್ರದಾಯ ಇರುವ ಕಾರಣ ನಗರದ ಮಾರುಕಟ್ಟೆಗೆ ಮೂರು ದಿನ ಮುಂಚಿತವಾಗಿಯೇ ಕಬ್ಬು ಲಗ್ಗೆ ಇಟ್ಟಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಕಬ್ಬನ್ನು ತಂದು ಮಾರಾಟ ಮಾಡಲು ಅನೇಕರು ಮುಂದಾಗಿದ್ದರು. ವ್ಯಾಪಾರಸ್ಥರು ರಿಪ್ಪನ್ಪೇಟೆ, ಮಂಡ್ಯದಿಂದ ಹೆಚ್ಚಾಗಿ ಕಬ್ಬು ತರಿಸಿದ್ದರು.</p>.<p>ಸಂತೆ ಹೊಂಡ, ಗಾಂಧಿ ವೃತ್ತ, ಚಳ್ಳಕೆರೆ ಟೋಲ್ಗೇಟ್, ಚೈತನ್ಯ ವೃತ್ತ ಮುಂಭಾಗ ಸೇರಿ ವಿವಿಧೆಡೆ ಬುಧವಾರ ಬೆಳಿಗ್ಗೆಯಿಂದಲೇ ಮಾರಾಟ ಜೋರಾಗಿ ನಡೆಯಿತು. ಜೋಡಿ ಕಬ್ಬು ₹ 100, ₹ 80, ₹ 60ರಂತೆ ಮಾರಾಟವಾದವು. ವ್ಯಾಪಾರಸ್ಥರ ಬಳಿ ಗ್ರಾಹಕರು ಚೌಕಾಸಿಗೂ ಇಳಿದರು.</p>.<p>ಎಳ್ಳು ಕೆ.ಜಿ ₹ 240, ಸಕ್ಕರೆ ಅಚ್ಚು ಕೆ.ಜಿ ₹ 200, ಶೇಂಗಾ ಕೆ.ಜಿ. ₹ 110 ಕಡಲೆ, ಬೆಲ್ಲ, ಜಿರಿಗೆ ಬೆಲೆ ಹೆಚ್ಚಾಗಿದ್ದರೂ ಸಂಪ್ರದಾಯದಂತೆ ಹಬ್ಬ ಆಚರಿಸಲೇಬೇಕು ಎಂಬ ಮನಸ್ಸುಳ್ಳ ಗ್ರಾಹಕರು ಅಂಗಡಿಗಳಲ್ಲಿ ಎಳ್ಳು-ಬೆಲ್ಲಕ್ಕೆ ಬೇಕಾಗುವ ಅಗತ್ಯ ಪದಾರ್ಥಗಳನ್ನು ಖರೀದಿಸಿದರು.</p>.<p>ಹಬ್ಬದ ಅಂಗವಾಗಿ ಬೆಳಿಗ್ಗೆ ಮನೆಯಲ್ಲಿ ಪೂಜೆ ಸಲ್ಲಿಸಿ, ದೇಗುಲಗಳಿಗೆ ಭೇಟಿ ನೀಡಿ ಭಕ್ತಿ ಸಮರ್ಪಿಸುತ್ತಾರೆ. ನಂತರ ಸಂಬಂಧಿಕರಿಗೆ, ಆತ್ಮೀಯರಿಗೆ ಹಾಗೂ ಸ್ನೇಹಿತರಿಗೆ ಎಳ್ಳು ಬೀರುವ ಪದ್ಧತಿ ಇದೆ. ಅದಕ್ಕಾಗಿ ಎಳ್ಳು ಪೊಟ್ಟಣಗಳ ಸಿದ್ಧತೆಯಲ್ಲೂ ಮಹಿಳೆಯರು ಉತ್ಸುಕತೆ ತೋರಿದರು.</p>.<p>ಅಂಗಡಿಗಳ ಬಳಿ ಎಳ್ಳು, ಬೆಲ್ಲ, ಸಕ್ಕರೆ ಸಿದ್ಧ ಪೊಟ್ಟಣಗಳ ಖರೀದಿಗೂ ಮಹಿಳೆಯರು ಮುಂದಾದರು. ಇದೇ ಸಂದರ್ಭದಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸಿದರು.</p>.<p>ದೇಗುಲಗಳಲ್ಲೂ ಸಕಲ ಸಿದ್ಧತೆ ನಡೆಯುತ್ತಿದೆ. ಕೆಲ ದೇಗುಲಗಳೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಜ.14ರಂದು ಬೆಳಿಗ್ಗೆ 5ಕ್ಕೆ ಅನೇಕ ಕಡೆಗಳಲ್ಲಿ ಪೂಜೆ, ಮಹಾಮಂಗಳಾರತಿ ನೆರವೇರಲಿದೆ. ಹೀಗಾಗಿ, ಬುಧವಾರ ರಾತ್ರಿಯಿಂದಲೇ ಪುಷ್ಪಾಲಂಕಾರ ಸೇರಿ ದೇವರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲು ಅರ್ಚಕರು ತಯಾರಿ ನಡೆಸಿದರು.</p>.<p>ಸುಗ್ಗಿ ಸಂಕ್ರಮಣವನ್ನು ಸಂಭ್ರಮದಿಂದ ಆಚರಿಸಲು ಹಳ್ಳಿಗಳಲ್ಲೂ ಸಿದ್ಧತೆಗಳು ಕಂಡು ಬಂದವು.ಒಂದು ದಿನ ಮುಂಚಿತವಾಗಿಯೇ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದಾಡಿದವು. ಸಂಬಂಧಿಕರಿಗೆ, ಸ್ನೇಹಿತರಿಗೆ, ಆತ್ಮೀಯರಿಗೆ, ಹಿತೈಷಿಗಳಿಗೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>‘ಎಳ್ಳು ಬೆಲ್ಲ ಸವಿಯುತ್ತಾ, ಕಬ್ಬಿನ ಸಿಹಿಯ ಹೀರುತ್ತಾ, ದ್ವೇಷ, ಅಸೂಹೆ ಮರೆಯುತ್ತಾ, ಸವಿ ಮಾತುಗಳನ್ನು ನುಡಿಯೋಣ..’ ಹೀಗೆ ಇನ್ನೂ ಅನೇಕ ರೀತಿಯ ಮಕರ ಸಂಕ್ರಾಂತಿಯ ಸಂದೇಶಗಳು ವಾಟ್ಸ್ಆ್ಯಪ್, ಸ್ಟೇಟಸ್, ಫೇಸ್ಬುಕ್ಗಳಲ್ಲಿ ಹರಿದಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲೆಯ ಹಲವೆಡೆ ಗುರುವಾರ ಆಚರಿಸಲಿರುವ ಮಕರ ಸಂಕ್ರಾಂತಿ ಹಬ್ಬಕ್ಕೆ ಬೆಲೆ ಏರಿಕೆ ಲೆಕ್ಕಿಸದೇ ಕಬ್ಬು, ಎಳ್ಳು-ಬೆಲ್ಲ, ರೊಟ್ಟಿ ಖರೀದಿಸಲು ಜನರು ಮುಂದಾದರು.</p>.<p>ಹಬ್ಬಕ್ಕೆ ಕಬ್ಬನ್ನು ಖರೀದಿಸುವ ಸಂಪ್ರದಾಯ ಇರುವ ಕಾರಣ ನಗರದ ಮಾರುಕಟ್ಟೆಗೆ ಮೂರು ದಿನ ಮುಂಚಿತವಾಗಿಯೇ ಕಬ್ಬು ಲಗ್ಗೆ ಇಟ್ಟಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಕಬ್ಬನ್ನು ತಂದು ಮಾರಾಟ ಮಾಡಲು ಅನೇಕರು ಮುಂದಾಗಿದ್ದರು. ವ್ಯಾಪಾರಸ್ಥರು ರಿಪ್ಪನ್ಪೇಟೆ, ಮಂಡ್ಯದಿಂದ ಹೆಚ್ಚಾಗಿ ಕಬ್ಬು ತರಿಸಿದ್ದರು.</p>.<p>ಸಂತೆ ಹೊಂಡ, ಗಾಂಧಿ ವೃತ್ತ, ಚಳ್ಳಕೆರೆ ಟೋಲ್ಗೇಟ್, ಚೈತನ್ಯ ವೃತ್ತ ಮುಂಭಾಗ ಸೇರಿ ವಿವಿಧೆಡೆ ಬುಧವಾರ ಬೆಳಿಗ್ಗೆಯಿಂದಲೇ ಮಾರಾಟ ಜೋರಾಗಿ ನಡೆಯಿತು. ಜೋಡಿ ಕಬ್ಬು ₹ 100, ₹ 80, ₹ 60ರಂತೆ ಮಾರಾಟವಾದವು. ವ್ಯಾಪಾರಸ್ಥರ ಬಳಿ ಗ್ರಾಹಕರು ಚೌಕಾಸಿಗೂ ಇಳಿದರು.</p>.<p>ಎಳ್ಳು ಕೆ.ಜಿ ₹ 240, ಸಕ್ಕರೆ ಅಚ್ಚು ಕೆ.ಜಿ ₹ 200, ಶೇಂಗಾ ಕೆ.ಜಿ. ₹ 110 ಕಡಲೆ, ಬೆಲ್ಲ, ಜಿರಿಗೆ ಬೆಲೆ ಹೆಚ್ಚಾಗಿದ್ದರೂ ಸಂಪ್ರದಾಯದಂತೆ ಹಬ್ಬ ಆಚರಿಸಲೇಬೇಕು ಎಂಬ ಮನಸ್ಸುಳ್ಳ ಗ್ರಾಹಕರು ಅಂಗಡಿಗಳಲ್ಲಿ ಎಳ್ಳು-ಬೆಲ್ಲಕ್ಕೆ ಬೇಕಾಗುವ ಅಗತ್ಯ ಪದಾರ್ಥಗಳನ್ನು ಖರೀದಿಸಿದರು.</p>.<p>ಹಬ್ಬದ ಅಂಗವಾಗಿ ಬೆಳಿಗ್ಗೆ ಮನೆಯಲ್ಲಿ ಪೂಜೆ ಸಲ್ಲಿಸಿ, ದೇಗುಲಗಳಿಗೆ ಭೇಟಿ ನೀಡಿ ಭಕ್ತಿ ಸಮರ್ಪಿಸುತ್ತಾರೆ. ನಂತರ ಸಂಬಂಧಿಕರಿಗೆ, ಆತ್ಮೀಯರಿಗೆ ಹಾಗೂ ಸ್ನೇಹಿತರಿಗೆ ಎಳ್ಳು ಬೀರುವ ಪದ್ಧತಿ ಇದೆ. ಅದಕ್ಕಾಗಿ ಎಳ್ಳು ಪೊಟ್ಟಣಗಳ ಸಿದ್ಧತೆಯಲ್ಲೂ ಮಹಿಳೆಯರು ಉತ್ಸುಕತೆ ತೋರಿದರು.</p>.<p>ಅಂಗಡಿಗಳ ಬಳಿ ಎಳ್ಳು, ಬೆಲ್ಲ, ಸಕ್ಕರೆ ಸಿದ್ಧ ಪೊಟ್ಟಣಗಳ ಖರೀದಿಗೂ ಮಹಿಳೆಯರು ಮುಂದಾದರು. ಇದೇ ಸಂದರ್ಭದಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸಿದರು.</p>.<p>ದೇಗುಲಗಳಲ್ಲೂ ಸಕಲ ಸಿದ್ಧತೆ ನಡೆಯುತ್ತಿದೆ. ಕೆಲ ದೇಗುಲಗಳೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಜ.14ರಂದು ಬೆಳಿಗ್ಗೆ 5ಕ್ಕೆ ಅನೇಕ ಕಡೆಗಳಲ್ಲಿ ಪೂಜೆ, ಮಹಾಮಂಗಳಾರತಿ ನೆರವೇರಲಿದೆ. ಹೀಗಾಗಿ, ಬುಧವಾರ ರಾತ್ರಿಯಿಂದಲೇ ಪುಷ್ಪಾಲಂಕಾರ ಸೇರಿ ದೇವರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲು ಅರ್ಚಕರು ತಯಾರಿ ನಡೆಸಿದರು.</p>.<p>ಸುಗ್ಗಿ ಸಂಕ್ರಮಣವನ್ನು ಸಂಭ್ರಮದಿಂದ ಆಚರಿಸಲು ಹಳ್ಳಿಗಳಲ್ಲೂ ಸಿದ್ಧತೆಗಳು ಕಂಡು ಬಂದವು.ಒಂದು ದಿನ ಮುಂಚಿತವಾಗಿಯೇ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದಾಡಿದವು. ಸಂಬಂಧಿಕರಿಗೆ, ಸ್ನೇಹಿತರಿಗೆ, ಆತ್ಮೀಯರಿಗೆ, ಹಿತೈಷಿಗಳಿಗೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>‘ಎಳ್ಳು ಬೆಲ್ಲ ಸವಿಯುತ್ತಾ, ಕಬ್ಬಿನ ಸಿಹಿಯ ಹೀರುತ್ತಾ, ದ್ವೇಷ, ಅಸೂಹೆ ಮರೆಯುತ್ತಾ, ಸವಿ ಮಾತುಗಳನ್ನು ನುಡಿಯೋಣ..’ ಹೀಗೆ ಇನ್ನೂ ಅನೇಕ ರೀತಿಯ ಮಕರ ಸಂಕ್ರಾಂತಿಯ ಸಂದೇಶಗಳು ವಾಟ್ಸ್ಆ್ಯಪ್, ಸ್ಟೇಟಸ್, ಫೇಸ್ಬುಕ್ಗಳಲ್ಲಿ ಹರಿದಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>