ವಿಶೇಷ ಅಲಂಕಾರ: ಪ್ರತಿ ವರ್ಷದಂತೆ ದೇವಾಲಯಗಳಲ್ಲಿ ಚಿತ್ತಾಕರ್ಷಕ ಅಲಂಕಾರ ಮಾಡಲಾಗಿತ್ತು. ಶುಕ್ರವಾರ ಸಂಜೆಯಿಂದಲೇ ದೇವಾಲಯಗಳಲ್ಲಿ ಬಗೆ ಬಗೆಯ ಬಣ್ಣಗಳಿಂದ ರಂಗೋಲಿ ಬಿಡಿಸಿ, ಹೂವು ಹಾಗೂ ವಿದ್ಯುತ್ ದೀಪಗಳಿಂದ ದೇವಾಲಯವನ್ನು ಅಲಂಕಾರ ಮಾಡಲಾಗಿತ್ತು. ಆಂಜನೇಯ ಸ್ವಾಮಿ ಮೂರ್ತಿಗೆ ಬೆಣ್ಣೆ, ದ್ರಾಕ್ಷಿಯಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಮುಂಜಾನೆ 6ಕ್ಕೆ ಅರ್ಚಕರು ಮಹಾಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದರು.