ಹೊಸದುರ್ಗ: ತಾಲ್ಲೂಕಿನ ಕಂಚೀಪುರದಲ್ಲಿ ಕಾಡಿನ ಮೊಲ ಬೇಟೆಯಾಡಿ, ಆ ಮೊಲಕ್ಕೆ ಓಲೆ ಹಾಕಿ ಪುನಃ ಕಾಡಿಗೆ ಬಿಡುವ ಮೂಲಕ ವಿಶೇಷವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.
ಸಂಕ್ರಾಂತಿ ಎಂದರೆ ಮನೆಯಲ್ಲಿ ಸಿಹಿ ಪದಾರ್ಥ ಸೇವಿಸಿ, ಬಂಧು ಬಳಗದೊಟ್ಟಿಗೆ ಪುಣ್ಯ ಸ್ಥಳಗಳಿಗೆ ತೆರಳುವುದು, ಎಳ್ಳು ಬೆಲ್ಲ ವಿನಿಮಯ ಸರ್ವೇ ಸಾಮಾನ್ಯ. ಆದರೆ, ತಾಲ್ಲೂಕಿನ ಕಂಚೀಪುರ ಗ್ರಾಮದಲ್ಲಿ ಮೊಲ ಭೇಟಿಯಾಡಿ, ದೇವರ ಉತ್ಸವ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸುವರು.