<p><strong>ಚಿಕ್ಕಜಾಜೂರು: </strong>ಗುರುವಾರ ನಡೆಯುವ ಮಕರ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಗೆ ಗ್ರಾಮದ ದೇವಾಲಯಗಳಲ್ಲಿ ಭರದ ಸಿದ್ಧತೆ ಕಂಡು ಬಂದಿತು.</p>.<p>ಡಿ. 16ರಿಂದ ಆರಂಭವಾದ ಧನುರ್ಮಾಸ ಪೂಜೆ ಬುಧವಾರ ಬೆಳಿಗ್ಗೆ ನಡೆದ ವಿಶೇಷ ಪೂಜೆಯೊಂದಿಗೆ ಸಮಾಪ್ತಿಯಾಯಿತು. ಬುಧವಾರ ಮುಂಜಾನೆ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<p>ಗುರುವಾರ ನಡೆಯುವ ಮಕರ ಸಂಕ್ರಾಂತಿಯ ವಿಶೇಷ ಪೂಜೆಗಾಗಿ ಗ್ರಾಮದ ಆಂಜನೇಯಸ್ವಾಮಿ, ರಾಮಕೃಷ್ಣ, ಬನಶಂಕರಿ ಹಾಗೂ ವೀರಭದ್ರಸ್ವಾಮಿ ದೇವಾಯಗಳಲ್ಲಿ ಅಲಂಕಾರ ಜೋರಾಗಿ ನಡೆಯುತ್ತಿದ್ದದು ಕಂಡು ಬಂದಿತು. ಗ್ರಾಮ ದೇವರು ಆಂಜನೇಯ ಸ್ವಾಮಿ ದೇವಸ್ಥಾನದ ಆವರಣವನ್ನು ಸಿಂಗರಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ 6 ಗಂಟೆಯ ನಂತರ, ಮಕರ ಸಂಕ್ರಮಣದ ವಿಶೇಷ ಪೂಜೆಯನ್ನು ನಡೆಸಲಾಗುವುದು. ಅಲ್ಲದೆ, ಸಂಜೆ ಆಂಜನೇಯಸ್ವಾಮಿ ಉತ್ಸವ ಮೂರ್ತಿ ಹಾಗೂ ಭೂತಪ್ಪ ಸ್ವಾಮಿಗಳನ್ನು ಮೊಲದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಗುವುದು.</p>.<p>ಗ್ರಾಮದ ಹೊರ ವಲಯದಲ್ಲಿ ದೂಪ ಸೇವೆ ನಡೆಸಿ, ಮೊಲಕ್ಕೆ ವಿಶೇಷ ಪೂಜೆ ಸಲ್ಲಿಸಿ, ಅದನ್ನು ಅಡವಿಗೆ ಬಿಡಲಾಗುವುದು. ಇದರೊಂದಿಗೆ ಒಂದು ತಿಂಗಳ ಕಾಲ ನಡೆದ ಧನುರ್ಮಾಸದ ಧಾರ್ಮಿಕ ಪೂಜೆಗಳಿಗೆ ತೆರೆ ಬೀಳುವುದು ಎಂದು ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು: </strong>ಗುರುವಾರ ನಡೆಯುವ ಮಕರ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಗೆ ಗ್ರಾಮದ ದೇವಾಲಯಗಳಲ್ಲಿ ಭರದ ಸಿದ್ಧತೆ ಕಂಡು ಬಂದಿತು.</p>.<p>ಡಿ. 16ರಿಂದ ಆರಂಭವಾದ ಧನುರ್ಮಾಸ ಪೂಜೆ ಬುಧವಾರ ಬೆಳಿಗ್ಗೆ ನಡೆದ ವಿಶೇಷ ಪೂಜೆಯೊಂದಿಗೆ ಸಮಾಪ್ತಿಯಾಯಿತು. ಬುಧವಾರ ಮುಂಜಾನೆ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<p>ಗುರುವಾರ ನಡೆಯುವ ಮಕರ ಸಂಕ್ರಾಂತಿಯ ವಿಶೇಷ ಪೂಜೆಗಾಗಿ ಗ್ರಾಮದ ಆಂಜನೇಯಸ್ವಾಮಿ, ರಾಮಕೃಷ್ಣ, ಬನಶಂಕರಿ ಹಾಗೂ ವೀರಭದ್ರಸ್ವಾಮಿ ದೇವಾಯಗಳಲ್ಲಿ ಅಲಂಕಾರ ಜೋರಾಗಿ ನಡೆಯುತ್ತಿದ್ದದು ಕಂಡು ಬಂದಿತು. ಗ್ರಾಮ ದೇವರು ಆಂಜನೇಯ ಸ್ವಾಮಿ ದೇವಸ್ಥಾನದ ಆವರಣವನ್ನು ಸಿಂಗರಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ 6 ಗಂಟೆಯ ನಂತರ, ಮಕರ ಸಂಕ್ರಮಣದ ವಿಶೇಷ ಪೂಜೆಯನ್ನು ನಡೆಸಲಾಗುವುದು. ಅಲ್ಲದೆ, ಸಂಜೆ ಆಂಜನೇಯಸ್ವಾಮಿ ಉತ್ಸವ ಮೂರ್ತಿ ಹಾಗೂ ಭೂತಪ್ಪ ಸ್ವಾಮಿಗಳನ್ನು ಮೊಲದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಗುವುದು.</p>.<p>ಗ್ರಾಮದ ಹೊರ ವಲಯದಲ್ಲಿ ದೂಪ ಸೇವೆ ನಡೆಸಿ, ಮೊಲಕ್ಕೆ ವಿಶೇಷ ಪೂಜೆ ಸಲ್ಲಿಸಿ, ಅದನ್ನು ಅಡವಿಗೆ ಬಿಡಲಾಗುವುದು. ಇದರೊಂದಿಗೆ ಒಂದು ತಿಂಗಳ ಕಾಲ ನಡೆದ ಧನುರ್ಮಾಸದ ಧಾರ್ಮಿಕ ಪೂಜೆಗಳಿಗೆ ತೆರೆ ಬೀಳುವುದು ಎಂದು ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>