ಚಿಕ್ಕಜಾಜೂರು: ಚಲಿಸುತ್ತಿದ್ದ ಗೂಡ್ಸ್ ರೈಲಿಗೆ ಸಿಲುಕಿ ಚಿಕ್ಕಜಾಜೂರಿನ ತೊಡರ ನಾಳ್ ಕೆ. ನಾಗರಾಜಪ್ಪ (51) ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ನಾಗರಾಜಪ್ಪ ಅವರು ಮನೆಗೆ ದಿನಸಿ ವಸ್ತುಗಳನ್ನು ತರಲು ಹೋಗಿ, ಹಿಂತಿರುಗುವಾಗ ಕತ್ತಲೆಯಲ್ಲಿ ರೈಲ್ವೆ ಹಳಿಯನ್ನು ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಈ ಅವಘಡ ಸಂಭವಿಸಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಶವವನ್ನು ನೀಡಲಾಯಿತು.