ಗೂಡ್ಸ್ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಚಿಕ್ಕಜಾಜೂರು: ಚಲಿಸುತ್ತಿದ್ದ ಗೂಡ್ಸ್ ರೈಲಿಗೆ ಸಿಲುಕಿ ಚಿಕ್ಕಜಾಜೂರಿನ ತೊಡರ ನಾಳ್ ಕೆ. ನಾಗರಾಜಪ್ಪ (51) ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ನಾಗರಾಜಪ್ಪ ಅವರು ಮನೆಗೆ ದಿನಸಿ ವಸ್ತುಗಳನ್ನು ತರಲು ಹೋಗಿ, ಹಿಂತಿರುಗುವಾಗ ಕತ್ತಲೆಯಲ್ಲಿ ರೈಲ್ವೆ ಹಳಿಯನ್ನು ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಈ ಅವಘಡ ಸಂಭವಿಸಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಶವವನ್ನು ನೀಡಲಾಯಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.