<p><strong>ಶ್ರೀರಾಂಪುರ</strong>: ಯುವತಿಯನ್ನು ಮಾತನಾಡಿಸಿದ ವಿಚಾರವಾಗಿ ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಸಮೀಪದ ನಾಗನಾಯಕನಕಟ್ಟೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.</p>.<p>ಗ್ರಾಮದ ಮನೋಜ್ (22) ಹತ್ಯೆಯಾದ ಯುವಕ. ಆರೋಪಿಗಳಾದ ಇಂದಿರಾಬಾಯಿ, ಸುಮಿತ್ರಬಾಯಿ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಘಟನೆಯ ಪ್ರಮುಖ ಆರೋಪಿ ರಘುನಾಯ್ಕ ತಲೆಮರೆಸಿಕೊಂಡಿದ್ದಾನೆ. </p>.<p>ಹಿರಿಯೂರು ತಾಲ್ಲೂಕಿನ ಸೋಮೇನಹಳ್ಳಿ ತಾಂಡಾದ ರಘುನಾಯ್ಕನ ಸಂಬಂಧಿ ನಾಗನಾಯಕನಕಟ್ಟೆ ಗ್ರಾಮದ ಯುವತಿಯನ್ನು ಮನೋಜ್ ಮಾತನಾಡಿಸುತ್ತಿದ್ದ ಎನ್ನುವ ಕಾರಣಕ್ಕೆ ಇಬ್ಬರ ಗಲಾಟೆ ನಡೆದಿತ್ತು. ಈ ದ್ವೇಷ ಹತ್ಯೆಗೆ ಕಾರಣ ಎನ್ನಲಾಗಿದೆ. ಗುರುವಾರ ರಾತ್ರಿ ಗ್ರಾಮಕ್ಕೆ ಬಂದಿದ್ದ ರಘುನಾಯ್ಕ ಹಾಗೂ ಇತರರು ಸೇರಿ ಮನೋಜ್ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡು ನರಳುತ್ತಿದ್ದ ಮನೋಜ್ನನ್ನು ಗ್ರಾಮಸ್ಥರು ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಧರ್ಮೇಂದ್ರಕುಮಾರ್ ಮೀನ, ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಚೈತ್ರಾ, ಶ್ರೀರಾಂಪುರ ಠಾಣೆ ಇನ್ಸ್ಪೆಕ್ಟರ್ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಾಂಪುರ</strong>: ಯುವತಿಯನ್ನು ಮಾತನಾಡಿಸಿದ ವಿಚಾರವಾಗಿ ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಸಮೀಪದ ನಾಗನಾಯಕನಕಟ್ಟೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.</p>.<p>ಗ್ರಾಮದ ಮನೋಜ್ (22) ಹತ್ಯೆಯಾದ ಯುವಕ. ಆರೋಪಿಗಳಾದ ಇಂದಿರಾಬಾಯಿ, ಸುಮಿತ್ರಬಾಯಿ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಘಟನೆಯ ಪ್ರಮುಖ ಆರೋಪಿ ರಘುನಾಯ್ಕ ತಲೆಮರೆಸಿಕೊಂಡಿದ್ದಾನೆ. </p>.<p>ಹಿರಿಯೂರು ತಾಲ್ಲೂಕಿನ ಸೋಮೇನಹಳ್ಳಿ ತಾಂಡಾದ ರಘುನಾಯ್ಕನ ಸಂಬಂಧಿ ನಾಗನಾಯಕನಕಟ್ಟೆ ಗ್ರಾಮದ ಯುವತಿಯನ್ನು ಮನೋಜ್ ಮಾತನಾಡಿಸುತ್ತಿದ್ದ ಎನ್ನುವ ಕಾರಣಕ್ಕೆ ಇಬ್ಬರ ಗಲಾಟೆ ನಡೆದಿತ್ತು. ಈ ದ್ವೇಷ ಹತ್ಯೆಗೆ ಕಾರಣ ಎನ್ನಲಾಗಿದೆ. ಗುರುವಾರ ರಾತ್ರಿ ಗ್ರಾಮಕ್ಕೆ ಬಂದಿದ್ದ ರಘುನಾಯ್ಕ ಹಾಗೂ ಇತರರು ಸೇರಿ ಮನೋಜ್ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡು ನರಳುತ್ತಿದ್ದ ಮನೋಜ್ನನ್ನು ಗ್ರಾಮಸ್ಥರು ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಧರ್ಮೇಂದ್ರಕುಮಾರ್ ಮೀನ, ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಚೈತ್ರಾ, ಶ್ರೀರಾಂಪುರ ಠಾಣೆ ಇನ್ಸ್ಪೆಕ್ಟರ್ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>