<p><strong>ಬಸವಿಗೊಂಡನಹಳ್ಳಿ (ಚಳ್ಳಕೆರೆ): </strong>ಹುಲುಬನಿ ಭೂಮಿಯನ್ನು ಗ್ರಾಮಠಾಣೆಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಘಟಪರ್ತಿ ಗ್ರಾಮ ಪಂಚಾಯಿತಿ ಬಸವಿಗೊಂಡನಹಳ್ಳಿ ಗ್ರಾಮಸ್ಥರು ಬುಧವಾರ ಧರಣಿ ಸತ್ಯಾಗ್ರಹ ನಡೆಸಿದರು.</p>.<p>‘ಕೆ. ತಿಪ್ಪೇಸ್ವಾಮಿ ಎಂಬುವವರು ಗ್ರಾಮದ ಸರ್ವೆ ನಂ– 1ರ 5 ಎಕರೆ 16 ಗುಂಟೆ ಹುಲುಬನಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಬೇರೆಯವರ ಹೆಸರಿಗೆ ಖಾತೆ ಮಾಡಿಕೊಡಲು ಮುಂದಾಗಿದ್ದಾರೆ. ಸರ್ಕಾರಿ ಜಾಗವನ್ನು ಈ ರೀತಿ ಖಾಸಗಿಯವರಿಗೆ ಖಾತೆ ಮಾಡುವುದು ಖಂಡನೀಯ.ಬಸವಿಗೊಂಡನಹಳ್ಳಿ ಗ್ರಾಮದ ಸರ್ಕಾರಿ ಹುಲುಬನಿ ಜಾಗ ಗ್ರಾಮ ಠಾಣೆಗೆ ಸೇರಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಭೇಟಿದ ತಹಶೀಲ್ದಾರ್ ಎನ್. ರಘುಮೂರ್ತಿ, ಅಗತ್ಯ ದಾಖಲೆ ಹಾಗೂ ಸ್ಥಳವನ್ನು ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಮುಖಂಡರಾದ ನಾಗರಾಜ, ಓಬಳೇಶ, ಎನ್. ಪ್ರಕಾಶ, ಸುರೇಶ್, ರಂಗಸ್ವಾಮಿ, ಶ್ರೀಧರ, ಲೋಕೇಶ, ತಿಮ್ಮಣ್ಣ, ಮಹಾಂತೇಶ, ಮಂಜುನಾಥ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಿಗೊಂಡನಹಳ್ಳಿ (ಚಳ್ಳಕೆರೆ): </strong>ಹುಲುಬನಿ ಭೂಮಿಯನ್ನು ಗ್ರಾಮಠಾಣೆಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಘಟಪರ್ತಿ ಗ್ರಾಮ ಪಂಚಾಯಿತಿ ಬಸವಿಗೊಂಡನಹಳ್ಳಿ ಗ್ರಾಮಸ್ಥರು ಬುಧವಾರ ಧರಣಿ ಸತ್ಯಾಗ್ರಹ ನಡೆಸಿದರು.</p>.<p>‘ಕೆ. ತಿಪ್ಪೇಸ್ವಾಮಿ ಎಂಬುವವರು ಗ್ರಾಮದ ಸರ್ವೆ ನಂ– 1ರ 5 ಎಕರೆ 16 ಗುಂಟೆ ಹುಲುಬನಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಬೇರೆಯವರ ಹೆಸರಿಗೆ ಖಾತೆ ಮಾಡಿಕೊಡಲು ಮುಂದಾಗಿದ್ದಾರೆ. ಸರ್ಕಾರಿ ಜಾಗವನ್ನು ಈ ರೀತಿ ಖಾಸಗಿಯವರಿಗೆ ಖಾತೆ ಮಾಡುವುದು ಖಂಡನೀಯ.ಬಸವಿಗೊಂಡನಹಳ್ಳಿ ಗ್ರಾಮದ ಸರ್ಕಾರಿ ಹುಲುಬನಿ ಜಾಗ ಗ್ರಾಮ ಠಾಣೆಗೆ ಸೇರಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಭೇಟಿದ ತಹಶೀಲ್ದಾರ್ ಎನ್. ರಘುಮೂರ್ತಿ, ಅಗತ್ಯ ದಾಖಲೆ ಹಾಗೂ ಸ್ಥಳವನ್ನು ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಮುಖಂಡರಾದ ನಾಗರಾಜ, ಓಬಳೇಶ, ಎನ್. ಪ್ರಕಾಶ, ಸುರೇಶ್, ರಂಗಸ್ವಾಮಿ, ಶ್ರೀಧರ, ಲೋಕೇಶ, ತಿಮ್ಮಣ್ಣ, ಮಹಾಂತೇಶ, ಮಂಜುನಾಥ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>