<p><strong>ಹೊಸದುರ್ಗ</strong>: ಹೊಳಲ್ಕೆರೆ ರಸ್ತೆಯ ಹೇರೂರು– ಹಳ್ಳಿಕಟ್ಟೆ ಬಳಿ ಗೊಬ್ಬರದ ಲಾರಿಗೆ ಗುರುವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿಯಿತು.</p>.<p>ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.</p>.<p>ಗುರುವಾರ ರಾತ್ರಿ 9.30 ರ ಸುಮಾರಿಗೆ ಚಿತ್ರದುರ್ಗದಿಂದ ಕುರಿ ಗೊಬ್ಬರವನ್ನು ಧರ್ಮಸ್ಥಳಕ್ಕೆ ಸಾಗಿಸುವ ಲಾರಿಗೆ, ಹೇರೂರು ಸಮೀಪ ( ಅರುಣ್ಯ ಇಲಾಖೆಯ ನರ್ಸರಿ ಬಳಿ) ಲಾರಿಯ ಹಿಂದಿನ ಟೈರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಗಂಗಸಮುದ್ರದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ಹೆಚ್. ಬಸವರಾಜ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>'ಲಾರಿಯ ಎರಡು ಟೈರ್ ಗಳು ಸುಟ್ಟಿವೆ, ಯಾವುದೇ ಅನಾಹುತಗಳು ಸಂಭವಿಸಿಲ್ಲ, ಚಾಲಂಕ ಹಾಗೂ ಸಹಾಯಕ ಆರಾಮಾಗಿದ್ದಾರೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಹೆಚ್. ಬಸವರಾಜ್ ಪ್ರಜಾವಾಣಿಗೆ ತಿಳಿಸಿದರು.'</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಹೊಳಲ್ಕೆರೆ ರಸ್ತೆಯ ಹೇರೂರು– ಹಳ್ಳಿಕಟ್ಟೆ ಬಳಿ ಗೊಬ್ಬರದ ಲಾರಿಗೆ ಗುರುವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿಯಿತು.</p>.<p>ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.</p>.<p>ಗುರುವಾರ ರಾತ್ರಿ 9.30 ರ ಸುಮಾರಿಗೆ ಚಿತ್ರದುರ್ಗದಿಂದ ಕುರಿ ಗೊಬ್ಬರವನ್ನು ಧರ್ಮಸ್ಥಳಕ್ಕೆ ಸಾಗಿಸುವ ಲಾರಿಗೆ, ಹೇರೂರು ಸಮೀಪ ( ಅರುಣ್ಯ ಇಲಾಖೆಯ ನರ್ಸರಿ ಬಳಿ) ಲಾರಿಯ ಹಿಂದಿನ ಟೈರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದ ಗಂಗಸಮುದ್ರದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ಹೆಚ್. ಬಸವರಾಜ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>'ಲಾರಿಯ ಎರಡು ಟೈರ್ ಗಳು ಸುಟ್ಟಿವೆ, ಯಾವುದೇ ಅನಾಹುತಗಳು ಸಂಭವಿಸಿಲ್ಲ, ಚಾಲಂಕ ಹಾಗೂ ಸಹಾಯಕ ಆರಾಮಾಗಿದ್ದಾರೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಹೆಚ್. ಬಸವರಾಜ್ ಪ್ರಜಾವಾಣಿಗೆ ತಿಳಿಸಿದರು.'</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>