ಸಮಾಜದ ಚುಕ್ಕಾಣಿ ಹಿಡಿಯುವ ವ್ಯಕ್ತಿ ಅಜ್ಞಾನಿಯಾದಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಿಲ್ಲ. ಆತ ಪರಮ ನೀಚನಾಗದೇ, ಪರಮಪ್ರೇಮಿಯಾಗಬೇಕು. ಮನೆ, ಮಠ, ಊರುಗಳಲ್ಲಿ ಸನ್ಮಾರ್ಗ ತೋರಿಸುವ ಕೆಲಸ ಕಣ್ಮರೆಯಾಗುತ್ತಿದೆ. ವಿವೇಕಿಗಳು ಇಲ್ಲದಿರುವುದರಿಂದ ಸಮಾಜ ದುಃಸ್ಥಿತಿಯತ್ತ ಸಾಗುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.