ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವೈಡರ್‌ಗೆ ಕಾರು ಡಿಕ್ಕಿ: ಮೂವರ ಸಾವು

ಬೆಂಗಳೂರಿನ ಗಾರ್ಮೆಂಟ್ ಕೆಲಸಕ್ಕೆ ಹೊರಟಿದ್ದ ಸೋಮಸಾಗರ ಗ್ರಾಮದ ಕುಟುಂಬ
Last Updated 21 ಆಗಸ್ಟ್ 2020, 20:38 IST
ಅಕ್ಷರ ಗಾತ್ರ

ಹಿರಿಯೂರು: ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ತಾಲ್ಲೂಕಿನ ಆನೆಸಿದ್ರಿ ಗೇಟ್ ಸಮೀಪ ಶುಕ್ರವಾರ ಮಾರುತಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಹಾನಗಲ್ ತಾಲ್ಲೂಕಿನ ಸೋಮಸಾಗರ ಗ್ರಾಮದ ಬಸವರಾಜಪ್ಪ (43), ಅವರ ಹೆಂಡತಿ ಸರೋಜಮ್ಮ (35) ಹಾಗೂ ಅವರ ಸಂಬಂಧಿ ಕಲವೀರಪ್ಪ ದೊಡ್ಡಮನಿ (43) ಮೃತಪಟ್ಟವರು.

ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಗಾರ್ಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಿಗಳಾಗಿದ್ದಅವರು, ಮರಳಿ ಕೆಲಸಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT