<p><strong>ಚಿತ್ರದುರ್ಗ</strong>: ಸತಿ-ಪತಿಗಳ ಮನಸ್ಸು ಒಂದಾಗದಿದ್ದರೆ ಸಂಸಾರದಲ್ಲಿ ವಿರಸ ಮೂಡುತ್ತದೆ. ದಂಪತಿ ನಡುವೆ ಅನುಮಾನ ಬರಬಾರದು. ಪರಸ್ಪರ ನಂಬಿಕೆಯಿಂದ ಸುಂದರ ಜೀವನ ಸಾಗಿಸಬೇಕು ಎಂದು ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲಹೆ ನೀಡಿದರು.</p>.<p>ಮುರುಘಾ ಮಠ ಹಾಗೂ ಎಸ್ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ವತಿಯಿಂದ ಸೋಮವಾರ ನಡೆದ 32ನೇ ವರ್ಷದ 12ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಅನುಮಾನ ಎಂಬುದು ದೊಡ್ಡರೋಗ. ಇದರಿಂದ ಎಷ್ಟೊ ಸಂಸಾರಗಳು ಹಾಳಾಗಿವೆ. ನಂಬಿಕೆ ಇದ್ದರೆ ಜೀವನ ಸುಸೂತ್ರವಾಗಿ ನಡೆಯುತ್ತದೆ. ಅನುಮಾನ ಮತ್ತು ಅಹಂಕಾರ ಬದುಕನ್ನು ತುಂಡರಿಸುತ್ತದೆ. ಅಹಂಕಾರದಿಂದ ಎಷ್ಟೊ ಜನರು ಅನಾಥಾಶ್ರಮ ಸೇರಿದ್ದಾರೆ’ ಎಂದು ಹೇಳಿದರು.</p>.<p>‘ಸತಿ– ಪತಿ ಸ್ನೇಹಿತರಂತೆ ಇರಬೇಕು. ಸುಳ್ಳು ಹೇಳುವುದನ್ನು ಕಡಿಮೆ ಮಾಡಬೇಕು. ನಂಬಿಕೆ ಎಂಬ ಸೂಜಿಯಿಂದ ಜೀವನವನ್ನು ಜೋಡಿಸಬೇಕು. ಬಸವಾದಿ ಶರಣರು ವೈಚಾರಿಕ ತತ್ವದ ಹಿನ್ನೆಲೆಯಲ್ಲಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಶಿಕಾರಿಪುರ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ‘ಗಂಡು-ಹೆಣ್ಣು ಮದುವೆಯಲ್ಲಿ ಒಂದಾಗುತ್ತಾರೆ. ಮನಸ್ಸುಗಳು ಒಂದಾಗಬೇಕು. ಒಬ್ಬರನ್ನೊಬ್ಬರು ಪರಸ್ಪರ ಅರ್ಥೈಸಿಕೊಳ್ಳಬೇಕು. ಮನುಷ್ಯ ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣಬೇಕು. ಕಷ್ಟಗಳನ್ನು ಮನುಷ್ಯ ಸಹಿಸಿಕೊಂಡರೆ ಉನ್ನತ ಮಟ್ಟಕ್ಕೆ ಏರಲು ಸಾಧ್ಯ’ ಎಂದು ನುಡಿದರು.</p>.<p>ತುಮಕೂರು ಡಿ.ಕಲ್ಕೇರೆಯ ತಿಪ್ಪೇರುದ್ರ ಸ್ವಾಮೀಜಿ, ‘ಬಸವಾದಿ ಪ್ರಮಥರು ಶಾಂತಿಯಿಂದ ಕ್ರಾಂತಿ ಮಾಡಿದರು. ಆರೋಗ್ಯ ಪೂರ್ಣವಾದ ಸಮಾಜದ ರಚನೆಗೆ ನಾವು ಮುಂದಾಗಬೇಕು. ಸದಾ ಒಳಿತನ್ನು ಮಾಡುತ್ತ ಸಾಗಬೇಕು. ಸಂಸಾರದ ರಥವನ್ನು ಸುಗಮವಾಗಿ ಎಳೆಯಬೇಕು. ಬದುಕು ವಿಕಾರವಾಗದೆ ವಿಕಾಸವಾಗಬೇಕು’ ಎಂದು<br />ಹೇಳಿದರು.</p>.<p>ನಾಗಾರ್ಜುನ - ಎನ್.ರಂಜಿತ ಬಾಯಿ ಅಂತರ್ಜಾತಿ ಸೇರಿದಂತೆ ನಾಲ್ಕು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಗೋವಿಂದಪ್ಪ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ಶರಣೆ ಮುಕ್ತಾಯಕ್ಕ, ಸನತ್ಕುಮಾರ್, ಪೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಸತಿ-ಪತಿಗಳ ಮನಸ್ಸು ಒಂದಾಗದಿದ್ದರೆ ಸಂಸಾರದಲ್ಲಿ ವಿರಸ ಮೂಡುತ್ತದೆ. ದಂಪತಿ ನಡುವೆ ಅನುಮಾನ ಬರಬಾರದು. ಪರಸ್ಪರ ನಂಬಿಕೆಯಿಂದ ಸುಂದರ ಜೀವನ ಸಾಗಿಸಬೇಕು ಎಂದು ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲಹೆ ನೀಡಿದರು.</p>.<p>ಮುರುಘಾ ಮಠ ಹಾಗೂ ಎಸ್ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ವತಿಯಿಂದ ಸೋಮವಾರ ನಡೆದ 32ನೇ ವರ್ಷದ 12ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಅನುಮಾನ ಎಂಬುದು ದೊಡ್ಡರೋಗ. ಇದರಿಂದ ಎಷ್ಟೊ ಸಂಸಾರಗಳು ಹಾಳಾಗಿವೆ. ನಂಬಿಕೆ ಇದ್ದರೆ ಜೀವನ ಸುಸೂತ್ರವಾಗಿ ನಡೆಯುತ್ತದೆ. ಅನುಮಾನ ಮತ್ತು ಅಹಂಕಾರ ಬದುಕನ್ನು ತುಂಡರಿಸುತ್ತದೆ. ಅಹಂಕಾರದಿಂದ ಎಷ್ಟೊ ಜನರು ಅನಾಥಾಶ್ರಮ ಸೇರಿದ್ದಾರೆ’ ಎಂದು ಹೇಳಿದರು.</p>.<p>‘ಸತಿ– ಪತಿ ಸ್ನೇಹಿತರಂತೆ ಇರಬೇಕು. ಸುಳ್ಳು ಹೇಳುವುದನ್ನು ಕಡಿಮೆ ಮಾಡಬೇಕು. ನಂಬಿಕೆ ಎಂಬ ಸೂಜಿಯಿಂದ ಜೀವನವನ್ನು ಜೋಡಿಸಬೇಕು. ಬಸವಾದಿ ಶರಣರು ವೈಚಾರಿಕ ತತ್ವದ ಹಿನ್ನೆಲೆಯಲ್ಲಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಶಿಕಾರಿಪುರ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ‘ಗಂಡು-ಹೆಣ್ಣು ಮದುವೆಯಲ್ಲಿ ಒಂದಾಗುತ್ತಾರೆ. ಮನಸ್ಸುಗಳು ಒಂದಾಗಬೇಕು. ಒಬ್ಬರನ್ನೊಬ್ಬರು ಪರಸ್ಪರ ಅರ್ಥೈಸಿಕೊಳ್ಳಬೇಕು. ಮನುಷ್ಯ ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣಬೇಕು. ಕಷ್ಟಗಳನ್ನು ಮನುಷ್ಯ ಸಹಿಸಿಕೊಂಡರೆ ಉನ್ನತ ಮಟ್ಟಕ್ಕೆ ಏರಲು ಸಾಧ್ಯ’ ಎಂದು ನುಡಿದರು.</p>.<p>ತುಮಕೂರು ಡಿ.ಕಲ್ಕೇರೆಯ ತಿಪ್ಪೇರುದ್ರ ಸ್ವಾಮೀಜಿ, ‘ಬಸವಾದಿ ಪ್ರಮಥರು ಶಾಂತಿಯಿಂದ ಕ್ರಾಂತಿ ಮಾಡಿದರು. ಆರೋಗ್ಯ ಪೂರ್ಣವಾದ ಸಮಾಜದ ರಚನೆಗೆ ನಾವು ಮುಂದಾಗಬೇಕು. ಸದಾ ಒಳಿತನ್ನು ಮಾಡುತ್ತ ಸಾಗಬೇಕು. ಸಂಸಾರದ ರಥವನ್ನು ಸುಗಮವಾಗಿ ಎಳೆಯಬೇಕು. ಬದುಕು ವಿಕಾರವಾಗದೆ ವಿಕಾಸವಾಗಬೇಕು’ ಎಂದು<br />ಹೇಳಿದರು.</p>.<p>ನಾಗಾರ್ಜುನ - ಎನ್.ರಂಜಿತ ಬಾಯಿ ಅಂತರ್ಜಾತಿ ಸೇರಿದಂತೆ ನಾಲ್ಕು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಗೋವಿಂದಪ್ಪ ಸ್ವಾಮೀಜಿ, ಬಸವರಾಜ ಸ್ವಾಮೀಜಿ, ಶರಣೆ ಮುಕ್ತಾಯಕ್ಕ, ಸನತ್ಕುಮಾರ್, ಪೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>