ಮುಖ್ಯಮಂತ್ರಿ ಸಲಹೆಗಾರ ಎಂ.ಲಕ್ಷ್ಮೀನಾರಾಯಣ ಮಾತನಾಡಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು 30 ವರ್ಷ ನಿರಂತರವಾಗಿ ನಡೆಯುತ್ತಿರುವುದು ಸಂತಸದ ವಿಚಾರ. ಲೋಕ ಕಲ್ಯಾಣಕ್ಕಾಗಿ ಜ್ಞಾನ ದಾಸೋಹ, ಅನ್ನ ದಾಸೋಹದ ಮೂಲಕ ಬಡ ಕುಟುಂಬಗಳಿಗೆ ಶರಣರು ಆಧಾರವಾಗಿದ್ದಾರೆ. ಬಸವಣ್ಣನವರ ಆಶಯ, ತತ್ವಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಬಸವ ಪುತ್ಥಳಿ ನಿರ್ಮಾಣ ಆಗುವುದರ ಮೂಲಕ ಚಿತ್ರದುರ್ಗ ಪ್ರವಾಸಿ ತಾಣವಾಗಬೇಕು’ ಎಂದು ತಿಳಿಸಿದರು.