ಶಿಕಾರಿಪುರದ ಸುನ್ನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮ್ಜಾದ್ ಹುಸೇನ್ ಮಾತನಾಡಿ, ‘ಮದುವೆ ನೆಪದಲ್ಲಿ ದುಂದು ವೆಚ್ಚ ಮಾಡಲಾಗುತ್ತಿದೆ. ಇದರಿಂದ ಖರ್ಚು ಹೆಚ್ಚಾಗಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ದೇಶದಲ್ಲಿ ಬಡತನ ಹೆಚ್ಚಾಗಲು ಇದು ಕೂಡ ಕಾರಣವಾಗಿದೆ. ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಸೇರಿ ಎಲ್ಲರೂ ಇಂತಹ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ’ ಎಂದು ಹೇಳಿದರು.