<p><strong>ಚಿತ್ರದುರ್ಗ</strong>: ರಾಜ್ಯದ ಶೋಷಿತ ಸಮುದಾಯಗಳಿಗೆ ಮುರುಘಾ ಮಠವೇ ತಾಯಿ ಇದ್ದಂತೆ. ಮಠ ಜನಕಲ್ಯಾಣ ಬಯಸಿದೆ ಎಂದು ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಒಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.</p>.<p>‘ಮಠ ಎಂದರೆ ಪರಂಪರೆ, ತಾಯಿ ಹಾಗೂ ಸರ್ವಾಂಗೀಣ ಪ್ರಗತಿ. ಮಠದಿಂದ ಎಲ್ಲ ಸಾಧನೆಗಳನ್ನು ಮಾಡಲು ಸಾಧ್ಯವಿದೆ. ಜನಕಲ್ಯಾಣ ಬಯಸುತ್ತ ನಿರಂತರವಾಗಿ ಮೂರು ದಶಕಗಳಿಂದ ಸಾಮೂಹಿಕ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ. ಇಂತಹ ಮದುವೆಗಳು ಸಾಮಾಜಿಕ ಸಾಮರಸ್ಯ, ಆರ್ಥಿಕ ಸಮಾನತೆ ತರುವ ಮಾರ್ಗ’ ಎಂದು ನುಡಿದರು.</p>.<p>ದಾವಣಗೆರೆಯ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ‘ಭಾವೈಕ್ಯದ ಕೇಂದ್ರ ಸಾಮೂಹಿಕ ಕಲ್ಯಾಣ ಮಹೋತ್ಸವ. ಇದರಿಂದ ಆರ್ಥಿಕ ಹೊರೆಯನ್ನು ತಡೆಯಲು ಸಾಧ್ಯವಿದೆ. 33 ವರ್ಷದಲ್ಲಿ ಸುಮಾರು 20 ಸಾವಿರ ವಿವಾಹಗಳಾಗಿವೆ. ಅಮವಾಸ್ಯೆ, ರಾಹುಕಾಲ ಎನ್ನದೇ ಎಲ್ಲ ಸಂದರ್ಭದಲ್ಲಿಯೂ ವಿವಾಹ ನೆರವೇರಿಸಲಾಗಿದೆ’ ಎಂದರು.</p>.<p>ಚಿದರವಳ್ಳಿಯ ಶಿದ್ದರಹಳ್ಳಿ ಪಾರಮಾರ್ಥ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ, ‘ದುಂದುವೆಚ್ಚವನ್ನು ಕಡಿಮೆ ಮಾಡಲು ಮಠವು ಸಾಮೂಹಿಕ ವಿವಾಹ ಮಾಡುತ್ತಾ ಬಂದಿದೆ. ಆರ್ಥಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯವನ್ನು ಗುರುಗಳು ಮಾಡುತ್ತಾ ಬಂದಿದ್ದಾರೆ’ ಎಂದರು.</p>.<p>ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶರಣ ಸಂಸ್ಕೃತಿ ಉತ್ಸವ ಸಮಿತಿ ಗೌರವಾಧ್ಯಕ್ಷ ಬಸವಕುಮಾರ ಸ್ವಾಮೀಜಿ, ಕಾರ್ಯಾಧ್ಯಕ್ಷ ಎಸ್.ಲಿಂಗಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ರಾಜ್ಯದ ಶೋಷಿತ ಸಮುದಾಯಗಳಿಗೆ ಮುರುಘಾ ಮಠವೇ ತಾಯಿ ಇದ್ದಂತೆ. ಮಠ ಜನಕಲ್ಯಾಣ ಬಯಸಿದೆ ಎಂದು ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಒಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.</p>.<p>‘ಮಠ ಎಂದರೆ ಪರಂಪರೆ, ತಾಯಿ ಹಾಗೂ ಸರ್ವಾಂಗೀಣ ಪ್ರಗತಿ. ಮಠದಿಂದ ಎಲ್ಲ ಸಾಧನೆಗಳನ್ನು ಮಾಡಲು ಸಾಧ್ಯವಿದೆ. ಜನಕಲ್ಯಾಣ ಬಯಸುತ್ತ ನಿರಂತರವಾಗಿ ಮೂರು ದಶಕಗಳಿಂದ ಸಾಮೂಹಿಕ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ. ಇಂತಹ ಮದುವೆಗಳು ಸಾಮಾಜಿಕ ಸಾಮರಸ್ಯ, ಆರ್ಥಿಕ ಸಮಾನತೆ ತರುವ ಮಾರ್ಗ’ ಎಂದು ನುಡಿದರು.</p>.<p>ದಾವಣಗೆರೆಯ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ‘ಭಾವೈಕ್ಯದ ಕೇಂದ್ರ ಸಾಮೂಹಿಕ ಕಲ್ಯಾಣ ಮಹೋತ್ಸವ. ಇದರಿಂದ ಆರ್ಥಿಕ ಹೊರೆಯನ್ನು ತಡೆಯಲು ಸಾಧ್ಯವಿದೆ. 33 ವರ್ಷದಲ್ಲಿ ಸುಮಾರು 20 ಸಾವಿರ ವಿವಾಹಗಳಾಗಿವೆ. ಅಮವಾಸ್ಯೆ, ರಾಹುಕಾಲ ಎನ್ನದೇ ಎಲ್ಲ ಸಂದರ್ಭದಲ್ಲಿಯೂ ವಿವಾಹ ನೆರವೇರಿಸಲಾಗಿದೆ’ ಎಂದರು.</p>.<p>ಚಿದರವಳ್ಳಿಯ ಶಿದ್ದರಹಳ್ಳಿ ಪಾರಮಾರ್ಥ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ, ‘ದುಂದುವೆಚ್ಚವನ್ನು ಕಡಿಮೆ ಮಾಡಲು ಮಠವು ಸಾಮೂಹಿಕ ವಿವಾಹ ಮಾಡುತ್ತಾ ಬಂದಿದೆ. ಆರ್ಥಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯವನ್ನು ಗುರುಗಳು ಮಾಡುತ್ತಾ ಬಂದಿದ್ದಾರೆ’ ಎಂದರು.</p>.<p>ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶರಣ ಸಂಸ್ಕೃತಿ ಉತ್ಸವ ಸಮಿತಿ ಗೌರವಾಧ್ಯಕ್ಷ ಬಸವಕುಮಾರ ಸ್ವಾಮೀಜಿ, ಕಾರ್ಯಾಧ್ಯಕ್ಷ ಎಸ್.ಲಿಂಗಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>