<p><strong>ಚಿತ್ರದುರ್ಗ</strong>:ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಳಗಾದ ಸಮಯದಲ್ಲೇ ಇಲ್ಲಿನ ಮುರುಘಾ ಮಠದಲ್ಲಿ ಆರು ಜೋಡಿ ವಧು - ವರರು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಕಾಲಿಟ್ಟರು.</p>.<p>ಏಳು ಜೋಡಿಗಳು ನೋಂದಣಿಯಾಗಿದ್ದರು ಸಹ ಕೊನೆ ಕ್ಷಣದಲ್ಲಿ ಆರು ಜೋಡಿಗಳು ಮಾತ್ರ ಹಾಜರಾದರು. ಪ್ರಭಾರ ಪೀಠಾಧಿಪತಿ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನೆರವೇರಿತು.</p>.<p>'ಮುರುಘಾ ಮಠದಲ್ಲಿ 32 ವರ್ಷಗಳಿಂದ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆದುಕೊಂಡು ಬಂದಿದೆ. ಇದು ಗಿನ್ನಿಸ್ ದಾಖಲೆ ತಲುಪಲು ಬಂದಿದೆ. ಇಂದು ಆರು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ' ಎಂದು ಮಹಾಂತ ರುದ್ರೇಶ್ವರ ಸ್ವಾಮೀಜಿ ತಿಳಿಸಿದರು.</p>.<p>'ಮಠದಲ್ಲಿ ಚಾಚು ತಪ್ಪದೇ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ. ಅನ್ನದಾಸೋಹ, ಶಿಕ್ಷಣ ದಾಸೋಹ , ಮುರುಘಾ ವನದ ಪ್ರವೇಶ ಸೇರಿದಂತೆ ಎಲ್ಲವೂ ಎಂದಿನಂತೆ ನಡೆಯುತ್ತಿದೆ. ಮುರುಘಾ ಮಠದಲ್ಲಿ ನೀರವ ಮೌನ ಇಲ್ಲ. ನಿರ್ಭಯವಾಗಿ ಭಕ್ತರು ಬರಬಹುದು' ಎಂದು ಅಭಯ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>:ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಳಗಾದ ಸಮಯದಲ್ಲೇ ಇಲ್ಲಿನ ಮುರುಘಾ ಮಠದಲ್ಲಿ ಆರು ಜೋಡಿ ವಧು - ವರರು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಕಾಲಿಟ್ಟರು.</p>.<p>ಏಳು ಜೋಡಿಗಳು ನೋಂದಣಿಯಾಗಿದ್ದರು ಸಹ ಕೊನೆ ಕ್ಷಣದಲ್ಲಿ ಆರು ಜೋಡಿಗಳು ಮಾತ್ರ ಹಾಜರಾದರು. ಪ್ರಭಾರ ಪೀಠಾಧಿಪತಿ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನೆರವೇರಿತು.</p>.<p>'ಮುರುಘಾ ಮಠದಲ್ಲಿ 32 ವರ್ಷಗಳಿಂದ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆದುಕೊಂಡು ಬಂದಿದೆ. ಇದು ಗಿನ್ನಿಸ್ ದಾಖಲೆ ತಲುಪಲು ಬಂದಿದೆ. ಇಂದು ಆರು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ' ಎಂದು ಮಹಾಂತ ರುದ್ರೇಶ್ವರ ಸ್ವಾಮೀಜಿ ತಿಳಿಸಿದರು.</p>.<p>'ಮಠದಲ್ಲಿ ಚಾಚು ತಪ್ಪದೇ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ. ಅನ್ನದಾಸೋಹ, ಶಿಕ್ಷಣ ದಾಸೋಹ , ಮುರುಘಾ ವನದ ಪ್ರವೇಶ ಸೇರಿದಂತೆ ಎಲ್ಲವೂ ಎಂದಿನಂತೆ ನಡೆಯುತ್ತಿದೆ. ಮುರುಘಾ ಮಠದಲ್ಲಿ ನೀರವ ಮೌನ ಇಲ್ಲ. ನಿರ್ಭಯವಾಗಿ ಭಕ್ತರು ಬರಬಹುದು' ಎಂದು ಅಭಯ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>