<p><strong>ಮೊಳಕಾಲ್ಮುರು:</strong> ತಾಯಿ ಮತ್ತು ನವಜಾತ ಶಿಶು ಮರಣ ತಪ್ಪಿಸಲು ಆರೋಗ್ಯ ಇಲಾಖೆ ಸೂಚಿಸುವ ಮಾರ್ಗದರ್ಶಿಗಳನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮುದಾಯ ಕೇಂದ್ರದ ವೈದ್ಯೆ ಭೂಮಿಕಾ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ತಾಯಿ ಮತ್ತು ಮಗು ಮರಣ ಪ್ರಮಾಣ ತಡೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಸಮುದಾಯ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ಇಂತಹ ಘಟನೆಗಳನ್ನು ತಪ್ಪಿಸಲು ಸಾಧ್ಯವಿದೆ. ಗರ್ಭಿಣಿಯರ ಜೊತೆ ಸಿಬ್ಬಂದಿ ಕಾಲ ಕಾಲಕ್ಕೆ ಸಮಾಲೋಚನೆ ಮಾಡುವ ಮೂಲಕ ಆರೋಗ್ಯದ ಮಾಹಿತಿ ಸಂಗ್ರಹಿ ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಬೇಕು ಎಂದರು.</p>.<p>ಆರೋಗ್ಯವಂತ ಮಗುವನ್ನು ಹೊಂದಲು ಗರ್ಭಿಣಿ ಸ್ತ್ರೀಗೆ ಒಟ್ಟು ಒಂದು ಸಾವಿರ ದಿನಗಳ ಅಗತ್ಯವಿದೆ. ಇದರಲ್ಲಿ ಹೆರಿಗೆಯಾದ ನಂತರದ ಪೋಷಣಾ ಅವಧಿಯೂ ಸೇರಿದೆ. ಕಾಂಗರೂ ಮದರ್ ಕೇರ್ ಮಾದರಿಯಲ್ಲಿ ಮಗು ಆರೈಕೆ ಮಾಡುವ ಮೂಲಕ ಮಗುವಿನ ತೂಕ ಕುಸಿತವಾಗದಂತೆ ಆರೈಕೆ ಮಾಡಬಹುದಾಗಿದೆ. ಈ ಚಿಕಿತ್ಸೆ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಸದುಪಯೋಗ ಮಾಡಿಕೊಳ್ಳಬಹುದು ಎಂದು ಟ್ರಷ್ಟ್ನ ಹಿರಿಯ ವ್ಯವಸ್ಥಾಪಕಿ ಡಾ. ಆಯೇಷಾ ತಿಳಿಸಿದರು.</p>.<p>ತಾಲ್ಲೂಕು ಘಟಕದ ಆಶಾ ಮೆಂಟರ್ ರಾಧಾ, ಹಿರಿಯ ಆರೋಗ್ಯ ಮೇಲ್ವಿಚಾರಕಿ ಮಾರುತಮ್ಮ, ತಾಲ್ಲೂಕು ಘಟಕದ ಸಂಯೋಜಕ ಮೇಘ, ತರಬೇತುದಾರರಾದ ಗುರುಪ್ರಸಾದ್, ಚಿಕ್ಕಣ್ಣ, ಗೋವಿಂದರಾಜ್, ತಾಲ್ಲೂಕು ನರ್ಸ್ ಮೆಂಟರ್ ಉಮಾಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಯಿ ಮತ್ತು ನವಜಾತ ಶಿಶು ಮರಣ ತಪ್ಪಿಸಲು ಆರೋಗ್ಯ ಇಲಾಖೆ ಸೂಚಿಸುವ ಮಾರ್ಗದರ್ಶಿಗಳನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮುದಾಯ ಕೇಂದ್ರದ ವೈದ್ಯೆ ಭೂಮಿಕಾ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ತಾಯಿ ಮತ್ತು ಮಗು ಮರಣ ಪ್ರಮಾಣ ತಡೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಸಮುದಾಯ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ಇಂತಹ ಘಟನೆಗಳನ್ನು ತಪ್ಪಿಸಲು ಸಾಧ್ಯವಿದೆ. ಗರ್ಭಿಣಿಯರ ಜೊತೆ ಸಿಬ್ಬಂದಿ ಕಾಲ ಕಾಲಕ್ಕೆ ಸಮಾಲೋಚನೆ ಮಾಡುವ ಮೂಲಕ ಆರೋಗ್ಯದ ಮಾಹಿತಿ ಸಂಗ್ರಹಿ ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಬೇಕು ಎಂದರು.</p>.<p>ಆರೋಗ್ಯವಂತ ಮಗುವನ್ನು ಹೊಂದಲು ಗರ್ಭಿಣಿ ಸ್ತ್ರೀಗೆ ಒಟ್ಟು ಒಂದು ಸಾವಿರ ದಿನಗಳ ಅಗತ್ಯವಿದೆ. ಇದರಲ್ಲಿ ಹೆರಿಗೆಯಾದ ನಂತರದ ಪೋಷಣಾ ಅವಧಿಯೂ ಸೇರಿದೆ. ಕಾಂಗರೂ ಮದರ್ ಕೇರ್ ಮಾದರಿಯಲ್ಲಿ ಮಗು ಆರೈಕೆ ಮಾಡುವ ಮೂಲಕ ಮಗುವಿನ ತೂಕ ಕುಸಿತವಾಗದಂತೆ ಆರೈಕೆ ಮಾಡಬಹುದಾಗಿದೆ. ಈ ಚಿಕಿತ್ಸೆ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಸದುಪಯೋಗ ಮಾಡಿಕೊಳ್ಳಬಹುದು ಎಂದು ಟ್ರಷ್ಟ್ನ ಹಿರಿಯ ವ್ಯವಸ್ಥಾಪಕಿ ಡಾ. ಆಯೇಷಾ ತಿಳಿಸಿದರು.</p>.<p>ತಾಲ್ಲೂಕು ಘಟಕದ ಆಶಾ ಮೆಂಟರ್ ರಾಧಾ, ಹಿರಿಯ ಆರೋಗ್ಯ ಮೇಲ್ವಿಚಾರಕಿ ಮಾರುತಮ್ಮ, ತಾಲ್ಲೂಕು ಘಟಕದ ಸಂಯೋಜಕ ಮೇಘ, ತರಬೇತುದಾರರಾದ ಗುರುಪ್ರಸಾದ್, ಚಿಕ್ಕಣ್ಣ, ಗೋವಿಂದರಾಜ್, ತಾಲ್ಲೂಕು ನರ್ಸ್ ಮೆಂಟರ್ ಉಮಾಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>