‘ಕೆಡುವುದು ಸುಲಭ, ಕಟ್ಟುವುದು ಕಷ್ಟ. ಮುಂದಿನ ಪೀಳಿಗೆಗೆ ದೊರಕಬೇಕಾದ ಮಾನವೀಯತೆಯ ಭದ್ರ ಬುನಾದಿಗೆ ಶ್ರಮಿಸೋಣ. ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಮತ್ತೆ ಕಲ್ಯಾಣದ ದಾರಿಯಲ್ಲಿ ಸಾಗೋಣ ಬನ್ನಿ...’ ಎಂದು ಚಿತ್ರದುರ್ಗದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕರೆನೀಡಲಾಯಿತು. ನಾಡಿನ ಚಿಂತಕರು, ಸಾಹಿತಿಗಳು ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ.