ಚಿತ್ರದುರ್ಗ: ‘ಬಿ.ಎಸ್.ಯಡಿಯೂರಪ್ಪ ಅಧಿಕಾರ ಹಸ್ತಾಂತರ ಮಾಡುವಾಗ ಕಣ್ಣೀರು ಹಾಕಿದರು. ಅವರು ಅಧಿಕಾರ ಬಿಟ್ಟು ಕೊಡುತ್ತಾರೆ ಎಂಬ ಗ್ಯಾರಂಟಿ ನಿಮಗಿತ್ತಾ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಎಂ.ಬಿ.ಪಾಟೀಲ, ಶಾಸಕ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು.