‘ನಗರದ ಜನಸಂಖ್ಯೆ 70,000 ದಾಟಿದೆ. ನಗರದ ಯಾವುದೇ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ನಮ್ಮಿಂದ ಸಾಧ್ಯವಾಗಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಮತ ಯಾಚನೆಗೆ ವಾರ್ಡ್ಗಳಿಗೆ ಹೋದರೆ ಮತದಾರರ ಪ್ರಶ್ನೆಗಳಿಗೆ ಉತ್ತರ ಹೇಳಲು ಸಾಧ್ಯವಿಲ್ಲ. ಬೀದಿನಾಯಿ, ಹಂದಿ, ಕೋತಿಗಳ ಹಾವಳಿ, ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ ಒಳಗೊಂಡಂತೆ ಯಾವುದೂ ನೆಟ್ಟಗೆ ನಡೆಯುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಸದಸ್ಯರು ಮುಖ ತೋರಿಸದಂತಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.