<p><strong>ಚಿತ್ರದುರ್ಗ</strong>: ‘ಪೋಷಕರು ತಮ್ಮ ಮಕ್ಕಳಿಗೆ ಕಲಿಕೆ ವಾತಾವರಣದ ಜತೆಗೆ ಉತ್ತೇಜನ ನೀಡಬೇಕು. ಅದು ಮಗುವಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ ಮುಂದಿನ ಸಾಧನೆಗೆ ದಾರಿ ದೀಪವಾಗುತ್ತದೆ’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.</p>.<p>ನಗರದ ಕವಾಡಿಗರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಪೋಷಕರು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸೂಕ್ತವಾದ ದಾರಿಗಳನ್ನು ಕಂಡುಕೊಳ್ಳಬೇಕು’ ಎಂದರು.</p>.<p>‘ಮಗುವನ್ನು ಶಾಲೆಗೆ ದಾಖಲು ಮಾಡಿದ ನಂತರ ಮಾಸಿಕ ಸಭೆಯಲ್ಲಿ ಭಾಗವಹಿಸಬೇಕು. ಬೋಧನೆ ಹಾಗೂ ಕಲಿಕೆಯ ಕುರಿತು ಚರ್ಚಿಸಿ ಸೂಕ್ತ ಮಾಹಿತಿ ನೀಡಿದಾಗ ಶೈಕ್ಷಣಿಕ ಚಟುವಟಿಕೆ ಉತ್ತಮಪಡಿಸಲು ಸಹಕಾರಿ ಆಗುತ್ತದೆ’ ಎಂದು ತಿಳಿಸಿದರು.</p>.<p>‘ಸರ್ಕಾರದಿಂದ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಪೂರಕ ಪೌಷ್ಟಿಕ ಆಹಾರದಂಥ ಕಾರ್ಯಕ್ರಮಗಳ ಹಮ್ಮಿಕೊಂಡು ಮಕ್ಕಳ ದೈಹಿಕ ಹಾಗೂ ಆರೋಗ್ಯ ಬೆಳವಣಿಗೆಗೆ ಸಹಾಯ ಮಾಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗಬೇಕು’ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಿವೈಪಿಸಿ ವೆಂಕಟೇಶಪ್ಪ, ಡಯಟ್ ಹಿರಿಯ ಉಪನ್ಯಾಸಕ ಎಸ್.ನಾಗಭೂಷಣ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಪೋಷಕರು ತಮ್ಮ ಮಕ್ಕಳಿಗೆ ಕಲಿಕೆ ವಾತಾವರಣದ ಜತೆಗೆ ಉತ್ತೇಜನ ನೀಡಬೇಕು. ಅದು ಮಗುವಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ ಮುಂದಿನ ಸಾಧನೆಗೆ ದಾರಿ ದೀಪವಾಗುತ್ತದೆ’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.</p>.<p>ನಗರದ ಕವಾಡಿಗರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಪೋಷಕರು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸೂಕ್ತವಾದ ದಾರಿಗಳನ್ನು ಕಂಡುಕೊಳ್ಳಬೇಕು’ ಎಂದರು.</p>.<p>‘ಮಗುವನ್ನು ಶಾಲೆಗೆ ದಾಖಲು ಮಾಡಿದ ನಂತರ ಮಾಸಿಕ ಸಭೆಯಲ್ಲಿ ಭಾಗವಹಿಸಬೇಕು. ಬೋಧನೆ ಹಾಗೂ ಕಲಿಕೆಯ ಕುರಿತು ಚರ್ಚಿಸಿ ಸೂಕ್ತ ಮಾಹಿತಿ ನೀಡಿದಾಗ ಶೈಕ್ಷಣಿಕ ಚಟುವಟಿಕೆ ಉತ್ತಮಪಡಿಸಲು ಸಹಕಾರಿ ಆಗುತ್ತದೆ’ ಎಂದು ತಿಳಿಸಿದರು.</p>.<p>‘ಸರ್ಕಾರದಿಂದ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಪೂರಕ ಪೌಷ್ಟಿಕ ಆಹಾರದಂಥ ಕಾರ್ಯಕ್ರಮಗಳ ಹಮ್ಮಿಕೊಂಡು ಮಕ್ಕಳ ದೈಹಿಕ ಹಾಗೂ ಆರೋಗ್ಯ ಬೆಳವಣಿಗೆಗೆ ಸಹಾಯ ಮಾಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗಬೇಕು’ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಿವೈಪಿಸಿ ವೆಂಕಟೇಶಪ್ಪ, ಡಯಟ್ ಹಿರಿಯ ಉಪನ್ಯಾಸಕ ಎಸ್.ನಾಗಭೂಷಣ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>