<p><strong>ಚಿತ್ರದುರ್ಗ:</strong> ಜಿಲ್ಲೆಯ ಐದು ಸಾವಿರ ಬೀದಿ ಬದಿ ವ್ಯಾಪಾರಸ್ಥರಿಗೆ ‘ಪಿಎಂ ಸ್ವನಿಧಿ’ ಯೋಜನೆಯಡಿ ಆರ್ಥಿಕ ನೆರವು ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಆವರಣದ ಸಂಸದರ ಕಚೇರಿ ಆವರಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿ ವ್ಯಾಪಾರಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲಿದೆ. ₹ 10,000ದಿಂದ ₹ 50,000ದವರೆಗೆ ನೆರವು ಪಡೆಯಲು ಅವಕಾಶವಿದೆ. ಎಳನೀರು ಮಾರಾಟಗಾರರು, ಕ್ಯಾಟರಿಂಗ್, ಫಾಸ್ಟ್ಫುಡ್ ತಯಾರಕರು, ಹಾಲು ಮಾರಾಟಗಾರರು ಸೇರಿ ಇತರರು ಇದರ ಪ್ರಯೋಜನ ಪಡೆಯಬಹುದು’ ಎಂದು ಹೇಳಿದರು.</p>.<p>‘ಸ್ಟಾರ್ಟ್ಅಪ್ ಸೇರಿ ಇತರ ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಮುದ್ರಾ ಯೋಜನೆಯಡಿ ₹ 10 ಲಕ್ಷ ಸಾಲ ನೀಡುವ ಯೋಜನೆ ಅನೇಕರ ಕೈಹಿಡಿದಿದೆ. ಸ್ವನಿಧಿ ಯೋಜನೆಯ ಬಗ್ಗೆ ಬೀದಿಬದಿ ವ್ಯಾಪಾರಸ್ಥರಿಗೆ ಮಾಹಿತಿ ನೀಡಲಾಗುವುದು. ತಿಂಗಳ ಅಂತ್ಯದ ವೇಳೆಗೆ 5,000 ಜನರಿಗೆ ಸೌಲಭ್ಯ ತಲುಪಿಸಲಾಗುವುದು’ ಎಂದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ಇದ್ದರು.</p>.<p>‘ಪಿಎಂ ಸ್ವನಿಧಿ’ ಯೋಜನೆಗೆ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಸಿಕ್ಕಿಲ್ಲ. ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ. </p><p><strong>-ಎ.ನಾರಾಯಣಸ್ವಾಮಿ ಕೇಂದ್ರ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಜಿಲ್ಲೆಯ ಐದು ಸಾವಿರ ಬೀದಿ ಬದಿ ವ್ಯಾಪಾರಸ್ಥರಿಗೆ ‘ಪಿಎಂ ಸ್ವನಿಧಿ’ ಯೋಜನೆಯಡಿ ಆರ್ಥಿಕ ನೆರವು ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಆವರಣದ ಸಂಸದರ ಕಚೇರಿ ಆವರಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿ ವ್ಯಾಪಾರಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲಿದೆ. ₹ 10,000ದಿಂದ ₹ 50,000ದವರೆಗೆ ನೆರವು ಪಡೆಯಲು ಅವಕಾಶವಿದೆ. ಎಳನೀರು ಮಾರಾಟಗಾರರು, ಕ್ಯಾಟರಿಂಗ್, ಫಾಸ್ಟ್ಫುಡ್ ತಯಾರಕರು, ಹಾಲು ಮಾರಾಟಗಾರರು ಸೇರಿ ಇತರರು ಇದರ ಪ್ರಯೋಜನ ಪಡೆಯಬಹುದು’ ಎಂದು ಹೇಳಿದರು.</p>.<p>‘ಸ್ಟಾರ್ಟ್ಅಪ್ ಸೇರಿ ಇತರ ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಮುದ್ರಾ ಯೋಜನೆಯಡಿ ₹ 10 ಲಕ್ಷ ಸಾಲ ನೀಡುವ ಯೋಜನೆ ಅನೇಕರ ಕೈಹಿಡಿದಿದೆ. ಸ್ವನಿಧಿ ಯೋಜನೆಯ ಬಗ್ಗೆ ಬೀದಿಬದಿ ವ್ಯಾಪಾರಸ್ಥರಿಗೆ ಮಾಹಿತಿ ನೀಡಲಾಗುವುದು. ತಿಂಗಳ ಅಂತ್ಯದ ವೇಳೆಗೆ 5,000 ಜನರಿಗೆ ಸೌಲಭ್ಯ ತಲುಪಿಸಲಾಗುವುದು’ ಎಂದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ಇದ್ದರು.</p>.<p>‘ಪಿಎಂ ಸ್ವನಿಧಿ’ ಯೋಜನೆಗೆ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಸಿಕ್ಕಿಲ್ಲ. ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ. </p><p><strong>-ಎ.ನಾರಾಯಣಸ್ವಾಮಿ ಕೇಂದ್ರ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>