ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರಿಗೆ 371 (ಜೆ) ಅಗತ್ಯವಿದೆ: ಸಚಿವ ಶ್ರೀರಾಮುಲು

Last Updated 28 ನವೆಂಬರ್ 2020, 8:57 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಂವಿಧಾನದ 371 (ಜೆ) ಕಾಲಂ ಅಡಿಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕಲ್ಪಿಸಿದ ವಿಶೇಷ ಸ್ಥಾನ ಅತ್ಯಂತ ಹಿಂದುಳಿದ ಮೊಳಕಾಲ್ಮುರು ತಾಲ್ಲೂಕಿಗೂ ಸಿಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊಳಕಾಲ್ಮುರು ತಾಲ್ಲೂಕಿಗೆ ವಿಶೇಷ ಸ್ಥಾನ ಲಭ್ಯವಾದರೆ ಇನ್ನಷ್ಟು ಅನುದಾನ ಹರಿದುಬರುತ್ತದೆ. ಹಿಂದುಳಿದ ತಾಲ್ಲೂಕಿನ ಜನರ ಏಳಿಗೆಗೆ ಇದು ನೆರವಾಗಲಿದೆ. ಆದರೆ, ಮೊಳಕಾಲ್ಮುರನ್ನು ಬಳ್ಳಾರಿ ಜಿಲ್ಲೆಗೆ ಸೇರಿಸುವ ವಿಚಾರದಲ್ಲಿ ಹೋರಾಟಗಾರರು ಹಾಗೂ ಜನರ ಅಭಿಪ್ರಾಯವೇ ಅಂತಿಮ’ ಎಂದು ಹೇಳಿದರು.

‘ಆಡಳಿತಾತ್ಮಕ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಅಖಂಡವಾಗಿದ್ದ ಜಿಲ್ಲೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರಗಳಿದ್ದವು. ಈಗ ಜಿಲ್ಲೆಯ ವ್ಯಾಪ್ತಿ ಕಿರಿದಾಗಿದೆ. ಮೊಳಕಾಲ್ಮುರು ತಾಲ್ಲೂಕು ಸೇರ್ಪಡೆ ವಿಚಾರ ಮುನ್ನೆಲೆಗೆ ಬಂದಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT