ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತರು, ಮಕ್ಕಳು, ಕಾರ್ಮಿಕರು, ಮಹಿಳೆಯರು ಸೇರಿ ಎಲ್ಲ ಕ್ಷೇತ್ರದ ಜನರನ್ನು ತಲುಪಿದ ಜನಸ್ನೇಹಿ ಬಜೆಟ್ ಇದಾಗಿದೆ. ಇಂತಹ ರಚನಾತ್ಮಕ ಬಜೆಟ್ ಈವರೆಗೆ ಮಂಡನೆಯಾಗಿರಲಿಲ್ಲ ಎಂಬ ಪ್ರಶಂಸೆ ಎಲ್ಲೆಡೆ ವ್ಯಕ್ತವಾಗುತ್ತಿದೆ. ಹೀಗಾಗಿ, ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ’ ಎಂದರು.